ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ ಹೊಗಳಿದ ನಳಿನ್‌: ಮುಖ್ಯಮಂತ್ರಿ ಯಡಿಯೂರಪ್ಪ ಓಲೈಕೆ ಯತ್ನ

Last Updated 5 ಅಕ್ಟೋಬರ್ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ನೆರೆ ಪರಿಹಾರ ಕಾರ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅಧಿಕಾರಿಗಳು ಅದ್ಭುತ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಹೇಳಿದ್ದಾರೆ.

‘ಈ ಹಿಂದಿನ ಯಾವ ಸರ್ಕಾರವೂ ಇಷ್ಟು ತ್ವರಿತವಾಗಿ ಸಂತ್ರಸ್ತರಿಗೆ ನೆರವಾಗಿಲ್ಲ. ನೆರೆ ಪರಿಹಾರದ ನಯಾ ಪೈಸೆಯೂ ದುರ್ಬಳಕೆ ಆಗಬಾರದು ಎಂಬ ಕಾರಣಕ್ಕೆ ನೇರವಾಗಿ ಸಂತ್ರಸ್ತರ ಖಾತೆಗೇ ಹಣ ಜಮಾ ಆಗುವಂತೆ ಮಾಡಿದ್ದಾರೆ’ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಕೇಂದ್ರ ಸರ್ಕಾರ ಇದೀಗ ಮಧ್ಯಂತರ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ₹ 1,200 ಕೋಟಿ ಬಿಡುಗಡೆ ಮಾಡಿದೆ. ಇದರ ಬಳಕೆ ಪ್ರಮಾಣಪತ್ರ ಬಂದ ನಂತರವಷ್ಟೇ ಕೇಂದ್ರ ಮುಂದಿನ ಕಂತಿನ ನೆರವು ಬಿಡುಗಡೆ ಮಾಡುತ್ತದೆ. ಕೇಂದ್ರ ಹಣ ಬಿಡುಗಡೆ ಮಾಡುವುದಕ್ಕೆ ಮೊದಲಾಗಿಯೇ ರಾಜ್ಯ ಸರ್ಕಾರ ₹ 3 ಸಾವಿರ ಕೋಟಿ ಬಿಡುಗಡೆ ಮಾಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT