ಮುಖ್ಯಮಂತ್ರಿ ಭೇಟಿ ಬಳಿಕ ಮಾತನಾಡಿದ ತೋಟಗಾರಿಕೆ ಸಚಿವ ನಾರಾಯಣಗೌಡ, ’ಜ್ಯೂಸ್, ವೈನ್ ತಯಾರಿಸುವ ಬೆಂಗಳೂರು ಬ್ಲೂ ದ್ರಾಕ್ಷಿ ದ್ರಾಕ್ಷಿ ವಿಲೇವಾರಿಗೆ ಡಿಸ್ಟಿಲರಿ ಸ್ಥಾಪಿಸಲು ಮುಖ್ಯಮಂತ್ರಿ ಅವರಿಗೆ ನಾನು, ಸುಧಾಕರ್ ಅವರು ಮನವಿ ಸಲ್ಲಿಸಿದೆವು. ಅದಕ್ಕೆ ಮುಖ್ಯಮಂತ್ರಿ ಅವರು ಒಪ್ಪಿಗೆ ಸೂಚಿಸಿದ್ದಾರೆ‘ ಎಂದು ಹೇಳಿದರು.