ಸುತ್ತೂರು ಜಾತ್ರೆಯ ಸಮಾರೋಪದಲ್ಲಿ ಮಾತನಾಡಿ, ‘ಮಾರ್ಚ್ 5 ರಂದು ಬಜೆಟ್ ಮಂಡಿಸಲಿದ್ದೇನೆ. ರೈತರ ಹಿತ ಕಾಪಾಡಲು ಸಾಧ್ಯವಾಗುವ ಎಲ್ಲಾ ಪ್ರಯತ್ನ ಮಾಡುವೆ. ಬೇರೆ ಯೋಜನೆಗಳಿಗೆ ಹಣ ಕಡಿಮೆಯಾದರೂ ಪರವಾಗಿಲ್ಲ, ರೈತರ ಜೀವನದಲ್ಲಿ ಬದಲಾವಣೆ ತರುವುದಕ್ಕೆ ಬದ್ಧನಾಗಿದ್ದೇನೆ. ಅದಕ್ಕಾಗಿ ಹಣ ಹೊಂದಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ’ ಎಂದರು.