<p><strong>ಬೆಂಗಳೂರು:</strong>ಕೋವಿಡ್–19 ಪ್ರಕರಣಗಳ ಸಂಖ್ಯೆ ಕ್ಷಿಪ್ರವಾಗಿ ಏರಿಕೆಯಾಗುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಾಜ್ಯದ ಜನತೆ ಲಾಕ್ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.</p>.<p>ಈ ಕುರಿತು ಪ್ರಕಟಣೆ ಹೊರಡಿಸಿರುವಅವರು, ‘ವಿಶ್ವದಾದ್ಯಂತ ಕೋವಿಡ್ - 19ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಪ್ರಧಾನ ಮಂತ್ರಿನರೇಂದ್ರ ಮೋದಿ ಅವರು ಜನರ ಜೀವ ರಕ್ಷಣೆಗಾಗಿ ದೇಶಾದ್ಯಂತ ಇದೇ ತಿಂಗಳ (ಏಪ್ರಿಲ್) 14ರವರೆಗೆ ಲಾಕ್ಡೌನ್ ಘೋಷಣೆ ಮಾಡಿದ್ದಾರೆ’</p>.<p>‘ನಮ್ಮ ರಾಜ್ಯದಲ್ಲಿಯೂ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ, ಕಲಬುರಗಿ ಜಿಲ್ಲೆಗಳಲ್ಲಿ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆಗಣನೀಯವಾಗಿ ಹೆಚ್ಚುತ್ತಿದೆ. ಈ ವೈರಸ್ ನಿಯಂತ್ರಣಕ್ಕಾಗಿ ಗಡಿ ಪ್ರದೇಶಗಳನ್ನು ಮುಚ್ಚುವುದು, ಸಾರ್ವಜನಿಕವಾಗಿ ಹೆಚ್ಚು ಹೆಚ್ಚು ಓಡಾಡುವಂತಹ ಪ್ರದೇಶಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದು, ಧಾರ್ಮಿಕ ಸ್ಥಳಗಳಲ್ಲಿ ಜನರು ಸೇರದಂತೆ ನಿರ್ಬಂಧಿಸುವುದರ ಜೊತೆಗೆ ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ’</p>.<p>‘ರಾಜ್ಯದ ಜನತೆ ಲಾಕ್ಡೌನ್ನ ಹಿಂದಿನ ಆಶಯವನ್ನು ಹಾಗೂ ಲಾಕ್ಡೌನ್ ಉಲ್ಲಂಘನೆಯಿಂದ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು ಅರಿತುಕೊಂಡು ಕಟ್ಟುನಿಟ್ಟಾಗಿ ಲಾಕ್ಡೌನ್ ಆದೇಶ ಪಾಲಿಸಬೇಕಾಗಿದೆ’ಎಂದು ಅವರು ಹೇಳಿದ್ದಾರೆ.</p>.<p>‘ಪಾಶ್ಚಿಮಾತ್ಯ ದೇಶಗಳಲ್ಲಿ ಈಗಾಗಲೇ ಕೋವಿಡ್-19 ನಿಯಂತ್ರಣಕ್ಕೆ ಸಿಗದ ಸ್ಥಿತಿ ತಲುಪಿದೆ. ಪ್ರಸ್ತುತ ಮಾನ್ಯ ಪ್ರಧಾನಿಯವರು ಸೂಚಿಸಿರುವ ದೇಶವ್ಯಾಪ್ತಿ ಲಾಕ್ಡೌನ್ ಅವಧಿಯು ಏಪ್ರಿಲ್ 14 ರಂದು ಮುಕ್ತಾಯಗೊಳ್ಳುತ್ತಿದ್ದು, ಇದನ್ನು ವಿಸ್ತರಿಸಬೇಕೋ ಬೇಡವೋ ಎಂಬ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆದುದರಿಂದ ಈ ಕುರಿತಂತೆ ಸಲಹೆ ಸೂಚನೆಗಳನ್ನು ನೀಡಬೇಕು’ ಎಂದುಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಕೋವಿಡ್–19 ಪ್ರಕರಣಗಳ ಸಂಖ್ಯೆ ಕ್ಷಿಪ್ರವಾಗಿ ಏರಿಕೆಯಾಗುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಾಜ್ಯದ ಜನತೆ ಲಾಕ್ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.</p>.<p>ಈ ಕುರಿತು ಪ್ರಕಟಣೆ ಹೊರಡಿಸಿರುವಅವರು, ‘ವಿಶ್ವದಾದ್ಯಂತ ಕೋವಿಡ್ - 19ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಪ್ರಧಾನ ಮಂತ್ರಿನರೇಂದ್ರ ಮೋದಿ ಅವರು ಜನರ ಜೀವ ರಕ್ಷಣೆಗಾಗಿ ದೇಶಾದ್ಯಂತ ಇದೇ ತಿಂಗಳ (ಏಪ್ರಿಲ್) 14ರವರೆಗೆ ಲಾಕ್ಡೌನ್ ಘೋಷಣೆ ಮಾಡಿದ್ದಾರೆ’</p>.<p>‘ನಮ್ಮ ರಾಜ್ಯದಲ್ಲಿಯೂ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ, ಕಲಬುರಗಿ ಜಿಲ್ಲೆಗಳಲ್ಲಿ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆಗಣನೀಯವಾಗಿ ಹೆಚ್ಚುತ್ತಿದೆ. ಈ ವೈರಸ್ ನಿಯಂತ್ರಣಕ್ಕಾಗಿ ಗಡಿ ಪ್ರದೇಶಗಳನ್ನು ಮುಚ್ಚುವುದು, ಸಾರ್ವಜನಿಕವಾಗಿ ಹೆಚ್ಚು ಹೆಚ್ಚು ಓಡಾಡುವಂತಹ ಪ್ರದೇಶಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದು, ಧಾರ್ಮಿಕ ಸ್ಥಳಗಳಲ್ಲಿ ಜನರು ಸೇರದಂತೆ ನಿರ್ಬಂಧಿಸುವುದರ ಜೊತೆಗೆ ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ’</p>.<p>‘ರಾಜ್ಯದ ಜನತೆ ಲಾಕ್ಡೌನ್ನ ಹಿಂದಿನ ಆಶಯವನ್ನು ಹಾಗೂ ಲಾಕ್ಡೌನ್ ಉಲ್ಲಂಘನೆಯಿಂದ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು ಅರಿತುಕೊಂಡು ಕಟ್ಟುನಿಟ್ಟಾಗಿ ಲಾಕ್ಡೌನ್ ಆದೇಶ ಪಾಲಿಸಬೇಕಾಗಿದೆ’ಎಂದು ಅವರು ಹೇಳಿದ್ದಾರೆ.</p>.<p>‘ಪಾಶ್ಚಿಮಾತ್ಯ ದೇಶಗಳಲ್ಲಿ ಈಗಾಗಲೇ ಕೋವಿಡ್-19 ನಿಯಂತ್ರಣಕ್ಕೆ ಸಿಗದ ಸ್ಥಿತಿ ತಲುಪಿದೆ. ಪ್ರಸ್ತುತ ಮಾನ್ಯ ಪ್ರಧಾನಿಯವರು ಸೂಚಿಸಿರುವ ದೇಶವ್ಯಾಪ್ತಿ ಲಾಕ್ಡೌನ್ ಅವಧಿಯು ಏಪ್ರಿಲ್ 14 ರಂದು ಮುಕ್ತಾಯಗೊಳ್ಳುತ್ತಿದ್ದು, ಇದನ್ನು ವಿಸ್ತರಿಸಬೇಕೋ ಬೇಡವೋ ಎಂಬ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆದುದರಿಂದ ಈ ಕುರಿತಂತೆ ಸಲಹೆ ಸೂಚನೆಗಳನ್ನು ನೀಡಬೇಕು’ ಎಂದುಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>