ಬೆಂಗಳೂರು: ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿರುವ 17 ಸಚಿವರಖಾತೆ ಹಂಚಿಕೆ ಶನಿವಾರ ಪೂರ್ಣಗೊಳಿಸುವುದಾಗಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
‘ಅಮಿತ್ ಶಾ ಅವರೊಂದಿಗೆ ಒಂದೂವರೆ ಗಂಟೆ ಸಮಗ್ರವಾಗಿ ಚರ್ಚೆ ನಡೆಸಲಾಗಿದೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದೇನೆ‘ ಎಂದಿದ್ದಾರೆ.
ಇಂದು ಮಧ್ಯಾಹ್ನ ಖಾತೆ ಹಂಚಿಕೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.