<p><strong>ಬೆಂಗಳೂರು:</strong> ‘ಇ-ವೇ ಬಿಲ್ ದುರ್ಬಳಕೆ ಪತ್ತೆ ಹಚ್ಚಿ ದಂಡ ವಿಧಿಸಬೇಕು. ಜೊತೆಗೆ, ಅಕ್ರಮವಾಗಿ ಸರಕು ಸಾಗಿಸುವ ಸಾರಿಗೆ ಕಂಪನಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.</p>.<p>ಅಲ್ಲದೆ, ₹ 40 ಲಕ್ಷಕ್ಕೂ ಹೆಚ್ಚಿನ ವ್ಯವಹಾರ ನಡೆಸುವ ಡೀಲರುಗಳು ಮತ್ತು ದೊಡ್ಡ ನಗರಗಳಲ್ಲಿ ತಿಂಗಳಿಗೆ₹ 20 ಲಕ್ಷಕ್ಕೂ ಹೆಚ್ಚು ಬಾಡಿಗೆ ಸಂಗ್ರಹಿಸುವ ವಾಣಿಜ್ಯ ಸಂಕೀರ್ಣಗಳ ಸಮೀಕ್ಷೆ ನಡೆಸುವಂತೆಯೂ ಅವರು ನಿರ್ದೇಶನ ನೀಡಿದರು.</p>.<p>ಗೃಹ ಕಚೇರಿ ಕೃಷ್ಣಾದಲ್ಲಿಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ರಾಜ್ಯದ ತೆರಿಗೆ ಸಂಗ್ರಹ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>‘ನಕಲಿ ಇ-ವೇ ಬಿಲ್ ಗಳ ಬಳಕೆ, ಸರಕು ಸಾಗಿಸಲು ಸಮಯಾವಕಾಶದ ದುರ್ಬಳಕೆ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವ ಉದ್ದೇಶದಿಂದ ರಸ್ತೆ ಜಾಗೃತ ತಂಡಗಳನ್ನು 77ರಿಂದ 116ಕ್ಕೆ ಹೆಚ್ಚಿಸಲಾಗಿದೆ. ಈ ತಂಡಗಳು 2.89 ಲಕ್ಷ ಸರಕು ವಾಹನಗಳು ಹಾಗೂ 7.46 ಲಕ್ಷ ಇ-ವೇ ಬಿಲ್ ಪರಿಶೀಲಿಸಿ, ಸುಮಾರು 300 ಅಕ್ರಮಗಳನ್ನು ಪತ್ತೆ ಮಾಡಿವೆ. ತೆರಿಗೆ ಮತ್ತು ದಂಡ ಸೇರಿ ಒಟ್ಟು ₹ 6.21 ಕೋಟಿ ಸಂಗ್ರಹಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ಕೇಂದ್ರದಿಂದ 2019-20ನೇ ಸಾಲಿನ ಡಿಸೆಂಬರ್ನಿಂದ ಫೆಬ್ರುವರಿ ತಿಂಗಳವರೆಗಿನ ಜಿಎಸ್ಟಿ (ಸರಕು ಸೇವಾ ತೆರಿಗೆ) ಪರಿಹಾರ ಮೊತ್ತ ₹ 4314.13 ಕೋಟಿ ಬಿಡುಗಡೆಯಾಗಿದೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಸಂಗ್ರಹದಲ್ಲಿಯೂ ಏರಿಕೆ ಉಂಟಾಗಿದೆ’ ಎಂದೂ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ಪ್ರಸಕ್ತ ಸಾಲಿನಲ್ಲಿ (2020–21) ಏಪ್ರಿಲ್ನಿಂದ ಈವರೆಗೆ ಪರಿಹಾರ ಮೊತ್ತವೂ ಸೇರಿ ಈವರೆಗೆ ₹ 8,000 ಕೋಟಿ ತೆರಿಗೆ ಸಂಗ್ರಹವಾಗಿದೆ’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತ ಎಂ.ಎಸ್. ಶ್ರೀಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಇ-ವೇ ಬಿಲ್ ದುರ್ಬಳಕೆ ಪತ್ತೆ ಹಚ್ಚಿ ದಂಡ ವಿಧಿಸಬೇಕು. ಜೊತೆಗೆ, ಅಕ್ರಮವಾಗಿ ಸರಕು ಸಾಗಿಸುವ ಸಾರಿಗೆ ಕಂಪನಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.</p>.<p>ಅಲ್ಲದೆ, ₹ 40 ಲಕ್ಷಕ್ಕೂ ಹೆಚ್ಚಿನ ವ್ಯವಹಾರ ನಡೆಸುವ ಡೀಲರುಗಳು ಮತ್ತು ದೊಡ್ಡ ನಗರಗಳಲ್ಲಿ ತಿಂಗಳಿಗೆ₹ 20 ಲಕ್ಷಕ್ಕೂ ಹೆಚ್ಚು ಬಾಡಿಗೆ ಸಂಗ್ರಹಿಸುವ ವಾಣಿಜ್ಯ ಸಂಕೀರ್ಣಗಳ ಸಮೀಕ್ಷೆ ನಡೆಸುವಂತೆಯೂ ಅವರು ನಿರ್ದೇಶನ ನೀಡಿದರು.</p>.<p>ಗೃಹ ಕಚೇರಿ ಕೃಷ್ಣಾದಲ್ಲಿಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ರಾಜ್ಯದ ತೆರಿಗೆ ಸಂಗ್ರಹ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>‘ನಕಲಿ ಇ-ವೇ ಬಿಲ್ ಗಳ ಬಳಕೆ, ಸರಕು ಸಾಗಿಸಲು ಸಮಯಾವಕಾಶದ ದುರ್ಬಳಕೆ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳುವ ಉದ್ದೇಶದಿಂದ ರಸ್ತೆ ಜಾಗೃತ ತಂಡಗಳನ್ನು 77ರಿಂದ 116ಕ್ಕೆ ಹೆಚ್ಚಿಸಲಾಗಿದೆ. ಈ ತಂಡಗಳು 2.89 ಲಕ್ಷ ಸರಕು ವಾಹನಗಳು ಹಾಗೂ 7.46 ಲಕ್ಷ ಇ-ವೇ ಬಿಲ್ ಪರಿಶೀಲಿಸಿ, ಸುಮಾರು 300 ಅಕ್ರಮಗಳನ್ನು ಪತ್ತೆ ಮಾಡಿವೆ. ತೆರಿಗೆ ಮತ್ತು ದಂಡ ಸೇರಿ ಒಟ್ಟು ₹ 6.21 ಕೋಟಿ ಸಂಗ್ರಹಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ಕೇಂದ್ರದಿಂದ 2019-20ನೇ ಸಾಲಿನ ಡಿಸೆಂಬರ್ನಿಂದ ಫೆಬ್ರುವರಿ ತಿಂಗಳವರೆಗಿನ ಜಿಎಸ್ಟಿ (ಸರಕು ಸೇವಾ ತೆರಿಗೆ) ಪರಿಹಾರ ಮೊತ್ತ ₹ 4314.13 ಕೋಟಿ ಬಿಡುಗಡೆಯಾಗಿದೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಸಂಗ್ರಹದಲ್ಲಿಯೂ ಏರಿಕೆ ಉಂಟಾಗಿದೆ’ ಎಂದೂ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ಪ್ರಸಕ್ತ ಸಾಲಿನಲ್ಲಿ (2020–21) ಏಪ್ರಿಲ್ನಿಂದ ಈವರೆಗೆ ಪರಿಹಾರ ಮೊತ್ತವೂ ಸೇರಿ ಈವರೆಗೆ ₹ 8,000 ಕೋಟಿ ತೆರಿಗೆ ಸಂಗ್ರಹವಾಗಿದೆ’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತ ಎಂ.ಎಸ್. ಶ್ರೀಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>