ಧರಣಿ ನಿರತ ವಿದ್ಯಾರ್ಥಿಗಳು ಭೇಟಿ ನೀಡಿದ ವೇಳೆ ಅವರು, ‘ಸರ್ಕಾರ ಆರಿಸಿರುವ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರವೇ ಶಿಷ್ಯವೇತನ ನೀಡಬೇಕು. ನಮ್ಮ ಕಾಲೇಜಿನ 80 ವೈದ್ಯರು ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ಸಂಬಳವನ್ನು ನಾವೇ ನೀಡುತ್ತಿದ್ದೇವೆ. ವೈದ್ಯಕೀಯ ಸೌಲಭ್ಯಗಳಿಗೆ ₹ 2 ಕೋಟಿ ನೀಡುತ್ತಿದ್ದೇವೆ. ಮೊದಲು ಸರ್ಕಾರವೇ ಶಿಷ್ಯವೇತನ ನೀಡುತ್ತಿತ್ತು. ಆದರೆ, ಒಂದು ವರ್ಷದಿಂದ ನೀಡುವುದಿಲ್ಲ ಎಂದು ಹೇಳುತ್ತಿದೆ’ ಎಂದಿದ್ದಾರೆ.