<p><strong>ಬೆಂಗಳೂರು:</strong> ಜೂನ್ 1ರಿಂದ ದೇವಸ್ಥಾನ, ಮಸೀದಿ, ಚರ್ಚ್ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ವಿಧಾನಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಪುಣ್ಯತಿಥಿ ಅಂಗವಾಗಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದರೆ, ಚರ್ಚ್ ಮತ್ತು ಮಸೀದಿಗಳಿಗೂ ಅದೇ ನೀತಿ ಅನ್ವಯ ಆಗುತ್ತದೆ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/heavy-rainfall-prediction-731145.html" itemprop="url">ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ: 10 ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'</a></p>.<p><strong>ಹೋಟೆಲ್ ಪುನರಾರಂಭಕ್ಕೆ ಪ್ರಧಾನಿಗೆ ಪತ್ರ: </strong>ರಾಜ್ಯದಲ್ಲಿ ಹೋಟೆಲ್ ಆರಂಭಿಸಲು ಅನುಮತಿ ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವುದಾಗಿ ಯಡಿಯೂರಪ್ಪ ಹೇಳಿದರು. ಹೋಟೆಲ್ ಮತ್ತು ರೆಸ್ಟೋರೆಂಟ್ಗಳನ್ನು ಪ್ರಾರಂಭಿಸಬೇಕು ಎಂಬ ಒತ್ತಡ ಬಂದಿದೆ. ಈ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದೇನೆ. ಲಾಕ್ಡೌನ್ ಸಡಿಲಗೊಳಿಸಿದ ನಂತರ ಸಾಕಷ್ಟು ಜನ ರಾಜ್ಯಕ್ಕೆ ಬರುತ್ತಿದ್ದಾರೆ. ಅವರಿಗೆ ಊಟ ಮತ್ತು ಉಪಾಹಾರಕ್ಕಾಗಿ ಹೋಟೆಲುಗಳ ಅಗತ್ಯವಿದೆ. ಕೇಂದ್ರ ಸರ್ಕಾರ ಒಪ್ಪಿಗೆಗಾಗಿ ಕಾಯುತ್ತಿದ್ದೇವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೂನ್ 1ರಿಂದ ದೇವಸ್ಥಾನ, ಮಸೀದಿ, ಚರ್ಚ್ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ವಿಧಾನಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಪುಣ್ಯತಿಥಿ ಅಂಗವಾಗಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದರೆ, ಚರ್ಚ್ ಮತ್ತು ಮಸೀದಿಗಳಿಗೂ ಅದೇ ನೀತಿ ಅನ್ವಯ ಆಗುತ್ತದೆ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/heavy-rainfall-prediction-731145.html" itemprop="url">ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ: 10 ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'</a></p>.<p><strong>ಹೋಟೆಲ್ ಪುನರಾರಂಭಕ್ಕೆ ಪ್ರಧಾನಿಗೆ ಪತ್ರ: </strong>ರಾಜ್ಯದಲ್ಲಿ ಹೋಟೆಲ್ ಆರಂಭಿಸಲು ಅನುಮತಿ ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವುದಾಗಿ ಯಡಿಯೂರಪ್ಪ ಹೇಳಿದರು. ಹೋಟೆಲ್ ಮತ್ತು ರೆಸ್ಟೋರೆಂಟ್ಗಳನ್ನು ಪ್ರಾರಂಭಿಸಬೇಕು ಎಂಬ ಒತ್ತಡ ಬಂದಿದೆ. ಈ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದೇನೆ. ಲಾಕ್ಡೌನ್ ಸಡಿಲಗೊಳಿಸಿದ ನಂತರ ಸಾಕಷ್ಟು ಜನ ರಾಜ್ಯಕ್ಕೆ ಬರುತ್ತಿದ್ದಾರೆ. ಅವರಿಗೆ ಊಟ ಮತ್ತು ಉಪಾಹಾರಕ್ಕಾಗಿ ಹೋಟೆಲುಗಳ ಅಗತ್ಯವಿದೆ. ಕೇಂದ್ರ ಸರ್ಕಾರ ಒಪ್ಪಿಗೆಗಾಗಿ ಕಾಯುತ್ತಿದ್ದೇವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>