<p><strong>ಬೆಂಗಳೂರು:</strong> ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಬೆಳಿಗ್ಗೆ ಕೇರಳದ ತಿರುವನಂತಪುರದ ಅನಂತ ಪದ್ಮನಾಭ ಮತ್ತು ರಾಜರಾಜೇಶ್ವರಿ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ.</p>.<p>ಗುರುವಾರದ ಸೂರ್ಯಗ್ರಹಣದಿಂದ ದೋಷ ಉಂಟಾಗುತ್ತದೆ ಎಂದು ಜ್ಯೋತಿಷಿಗಳ ಮಾತನ್ನು ನಂಬಿರುವ ಬಿಎಸ್ವೈ, ಅದರ ಪರಿಹಾರಕ್ಕಾಗಿ ಕೇರಳದ ದೇಗುಲಗಳಲ್ಲಿ ವಿಶೇಷ ಹೋಮ ಮತ್ತು ಪೂಜೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಸೂರ್ಯ ಗ್ರಹಣದಿಂದ ವೃಶ್ಚಿಕ ಮತ್ತು ಧನಸ್ಸು ರಾಶಿಯವರಿಗೆ ದೋಷ ಇದೆ ಎಂದು ಜ್ಯೋತಿಷಿಗಳು ಹೇಳಿದ್ದಾರೆ. ಯಡಿಯೂರಪ್ಪ ಅವರದು ವೃಶ್ಚಿಕ ರಾಶಿಯಾಗಿದ್ದು, ದೋಷ ಪರಿಹಾರಕ್ಕಾಗಿ ಕೇರಳದ ದೇಗುಲದ ಮೋರೆ ಹೋಗಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಬೆಳಿಗ್ಗೆ ಕೇರಳದ ತಿರುವನಂತಪುರದ ಅನಂತ ಪದ್ಮನಾಭ ಮತ್ತು ರಾಜರಾಜೇಶ್ವರಿ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ.</p>.<p>ಗುರುವಾರದ ಸೂರ್ಯಗ್ರಹಣದಿಂದ ದೋಷ ಉಂಟಾಗುತ್ತದೆ ಎಂದು ಜ್ಯೋತಿಷಿಗಳ ಮಾತನ್ನು ನಂಬಿರುವ ಬಿಎಸ್ವೈ, ಅದರ ಪರಿಹಾರಕ್ಕಾಗಿ ಕೇರಳದ ದೇಗುಲಗಳಲ್ಲಿ ವಿಶೇಷ ಹೋಮ ಮತ್ತು ಪೂಜೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಸೂರ್ಯ ಗ್ರಹಣದಿಂದ ವೃಶ್ಚಿಕ ಮತ್ತು ಧನಸ್ಸು ರಾಶಿಯವರಿಗೆ ದೋಷ ಇದೆ ಎಂದು ಜ್ಯೋತಿಷಿಗಳು ಹೇಳಿದ್ದಾರೆ. ಯಡಿಯೂರಪ್ಪ ಅವರದು ವೃಶ್ಚಿಕ ರಾಶಿಯಾಗಿದ್ದು, ದೋಷ ಪರಿಹಾರಕ್ಕಾಗಿ ಕೇರಳದ ದೇಗುಲದ ಮೋರೆ ಹೋಗಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>