ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಹಣ ದೋಷ: ಕೇರಳ ದೇಗುಲಕ್ಕೆ ಬಿಎಸ್‌ವೈ

Last Updated 23 ಡಿಸೆಂಬರ್ 2019, 19:40 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಂಗಳವಾರ ಬೆಳಿಗ್ಗೆ ಕೇರಳದ ತಿರುವನಂತಪುರದ ಅನಂತ ಪದ್ಮನಾಭ ಮತ್ತು ರಾಜರಾಜೇಶ್ವರಿ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ.

ಗುರುವಾರದ ಸೂರ್ಯಗ್ರಹಣದಿಂದ ದೋಷ ಉಂಟಾಗುತ್ತದೆ ಎಂದು ಜ್ಯೋತಿಷಿಗಳ ಮಾತನ್ನು ನಂಬಿರುವ ಬಿಎಸ್‌ವೈ, ಅದರ ಪರಿಹಾರಕ್ಕಾಗಿ ಕೇರಳದ ದೇಗುಲಗಳಲ್ಲಿ ವಿಶೇಷ ಹೋಮ ಮತ್ತು ಪೂಜೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೂರ್ಯ ಗ್ರಹಣದಿಂದ ವೃಶ್ಚಿಕ ಮತ್ತು ಧನಸ್ಸು ರಾಶಿಯವರಿಗೆ ದೋಷ ಇದೆ ಎಂದು ಜ್ಯೋತಿಷಿಗಳು ಹೇಳಿದ್ದಾರೆ. ಯಡಿಯೂರಪ್ಪ ಅವರದು ವೃಶ್ಚಿಕ ರಾಶಿಯಾಗಿದ್ದು, ದೋಷ ಪರಿಹಾರಕ್ಕಾಗಿ ಕೇರಳದ ದೇಗುಲದ ಮೋರೆ ಹೋಗಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT