ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೆರೆ’ ಕಾಮೇಗೌಡರಿಗೆ ಸೂರಿನ ಭರವಸೆ ನೀಡಿದ ಸಿ.ಎಂ ಯಡಿಯೂರಪ್ಪ

ಎಲ್ಲ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
Last Updated 2 ಜುಲೈ 2020, 21:23 IST
ಅಕ್ಷರ ಗಾತ್ರ

ಮಳವಳ್ಳಿ(ಮಂಡ್ಯ): ತಾಲ್ಲೂಕಿನ ಕುಂದೂರು ಬೆಟ್ಟದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಹಲವಾರು ಕೆರೆಗಳನ್ನು ನಿರ್ಮಿಸಿರುವ ದಾಸನದೊಡ್ಡಿ ಗ್ರಾಮದ ಕಾಮೇಗೌಡರಿಗೆ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗುರುವಾರ ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ಕಾಮೇಗೌಡರ ಮನವಿಗೆ ಸ್ಪಂದಿಸಿದ ಯಡಿಯೂರಪ್ಪ, ಕೆರೆಗಳ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ.

‘ಸರ್ಕಾರವೇ ನಿವೇಶನ ನೀಡಿ, ಮನೆ ಕಟ್ಟಿಸಿಕೊಡುವುದಾಗಿ ಹಾಗೂ ಮಗನಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ನೀಡುವುದಾಗಿ ಸಿ.ಎಂ ಆಶ್ವಾಸನೆ ನೀಡಿದರು’ ಎಂದು ಕಾಮೇಗೌಡರು ತಿಳಿಸಿದರು.

ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕಾಮೇಗೌಡರ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ಅಲ್ಲದೇ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ವಿಡಿಯೊ ಕರೆ ಮಾಡಿ ಚರ್ಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT