<p><strong>ಮಳವಳ್ಳಿ(ಮಂಡ್ಯ):</strong> ತಾಲ್ಲೂಕಿನ ಕುಂದೂರು ಬೆಟ್ಟದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಹಲವಾರು ಕೆರೆಗಳನ್ನು ನಿರ್ಮಿಸಿರುವ ದಾಸನದೊಡ್ಡಿ ಗ್ರಾಮದ ಕಾಮೇಗೌಡರಿಗೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಕರೆ ಮಾಡಿ ಆರೋಗ್ಯ ವಿಚಾರಿಸಿದರು.</p>.<p>ಕಾಮೇಗೌಡರ ಮನವಿಗೆ ಸ್ಪಂದಿಸಿದ ಯಡಿಯೂರಪ್ಪ, ಕೆರೆಗಳ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ.</p>.<p>‘ಸರ್ಕಾರವೇ ನಿವೇಶನ ನೀಡಿ, ಮನೆ ಕಟ್ಟಿಸಿಕೊಡುವುದಾಗಿ ಹಾಗೂ ಮಗನಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ನೀಡುವುದಾಗಿ ಸಿ.ಎಂ ಆಶ್ವಾಸನೆ ನೀಡಿದರು’ ಎಂದು ಕಾಮೇಗೌಡರು ತಿಳಿಸಿದರು.</p>.<p>ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕಾಮೇಗೌಡರ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ಅಲ್ಲದೇ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ವಿಡಿಯೊ ಕರೆ ಮಾಡಿ ಚರ್ಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ(ಮಂಡ್ಯ):</strong> ತಾಲ್ಲೂಕಿನ ಕುಂದೂರು ಬೆಟ್ಟದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಹಲವಾರು ಕೆರೆಗಳನ್ನು ನಿರ್ಮಿಸಿರುವ ದಾಸನದೊಡ್ಡಿ ಗ್ರಾಮದ ಕಾಮೇಗೌಡರಿಗೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಕರೆ ಮಾಡಿ ಆರೋಗ್ಯ ವಿಚಾರಿಸಿದರು.</p>.<p>ಕಾಮೇಗೌಡರ ಮನವಿಗೆ ಸ್ಪಂದಿಸಿದ ಯಡಿಯೂರಪ್ಪ, ಕೆರೆಗಳ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ.</p>.<p>‘ಸರ್ಕಾರವೇ ನಿವೇಶನ ನೀಡಿ, ಮನೆ ಕಟ್ಟಿಸಿಕೊಡುವುದಾಗಿ ಹಾಗೂ ಮಗನಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ನೀಡುವುದಾಗಿ ಸಿ.ಎಂ ಆಶ್ವಾಸನೆ ನೀಡಿದರು’ ಎಂದು ಕಾಮೇಗೌಡರು ತಿಳಿಸಿದರು.</p>.<p>ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕಾಮೇಗೌಡರ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ಅಲ್ಲದೇ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ವಿಡಿಯೊ ಕರೆ ಮಾಡಿ ಚರ್ಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>