ಈ ಯೋಜನೆಯ ಸೌಲಭ್ಯಕ್ಕಾಗಿ ರಾಜ್ಯದಲ್ಲಿ 8,54,000 ಅರ್ಜಿಗಳು ಸಲ್ಲಿಕೆಯಾಗಿವೆ. ಅದರಲ್ಲಿನ 2,08,000 ಅರ್ಜಿಗಳ ಮಾಹಿತಿಯನ್ನು ಯೋಜನೆಯ ತಂತ್ರಾಂಶಕ್ಕೆ ಬುಧವಾರ ಬೆಳಿಗ್ಗೆ ಹೊತ್ತಿಗೆ( ಮಾರ್ಚ್ 7) ಅಪ್ ಲೋಡ್ ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರ ಅದರಲ್ಲಿ ಕೇವಲ 17 ಫಲಾನುಭವಿಗಳನ್ನು ಆಯ್ಕೆ ಮಾಡಿದೆ. ಅದರಲ್ಲಿಯೂ 6ರೈತರ ಖಾತೆಗೆ ಮಾತ್ರ ಹಣ ಜಮಾ ಮಾಡಿದೆ. ಅದರಲ್ಲಿ ಒಬ್ಬರ ಖಾತೆಗೆ ₹950ಬಂದಿದೆ ಎಂದುವಾಗ್ದಾಳಿ ನಡೆಸಿದರು.