ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ತೀರ್ಮಾನ ಪ್ರಧಾನಿಗೆ ಅರ್ಥವಾಗಲ್ಲ

ಮೋದಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
Last Updated 6 ಮಾರ್ಚ್ 2019, 19:26 IST
ಅಕ್ಷರ ಗಾತ್ರ

ಬೆಂಗಳೂರು: ‘ದೇಶದಲ್ಲಿ 70 ವರ್ಷಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ. 55 ತಿಂಗಳಲ್ಲಿ ನಾವೇ ಎಲ್ಲ ಅಭಿವೃದ್ಧಿ ಮಾಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಅವರಿಗೆ ನಮ್ಮ ಮಾತುಗಳು ಹಾಗೂ ತೀರ್ಮಾನಗಳು ಅರ್ಥವಾಗುವುದಿಲ್ಲ’ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ಬುಧವಾರ ನಡೆದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ನಿಮಗೆ (ರೈತರಿಗೆ) ಪ್ರಧಾನಿ ಭಾಷಣ ಬಹಳ ಚೆನ್ನಾಗಿದೆ ಅನಿಸಬಹುದು. ಆದರೆ, ಅವರ ತೀರ್ಮಾನಗಳು ಅನುಷ್ಠಾನವಾಗುವಂಥದ್ದಲ್ಲ’ ಎಂದರು.

‘ಕಳೆದ ನಾಲ್ಕೂವರೆ ವರ್ಷಗಳಲ್ಲಿ ಮೋದಿ ಅವರು ರೈತರ ಪರ ಕೆಲಸ ಮಾಡಲಿಲ್ಲ. ಚುನಾವಣೆ ಹತ್ತಿರವಾದ ಕೂಡಲೇ ರೈತರ ನೆನಪಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT