ಈ ಮಧ್ಯೆ, ಮೋದಿ ಆರೋಪಕ್ಕೆ ಮುಖ್ಯಮಂತ್ರಿಗಳ ಕಚೇರಿಯೂ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ‘ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರುನಾನು ಆಡದೇ ಇರುವ ಮಾತನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದನ್ನು ಕೇಳಿ ವಿನೋದವಾಗಿದೆ. ಕೃಷಿ ಸಾಲದ ವಿಚಾರದ ಬಳಿಕ ಇದೀಗ ಎರಡನೇ ಬಾರಿ ಅವರು ಸುಳ್ಳು ಮಾಹಿತಿ/ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ನಮ್ಮ ಮೈತ್ರಿ ಸರ್ಕಾರದ ಅಭಿವೃದ್ಧಿ ಅಜೆಂಡಾವನ್ನು ತಡೆಯಲಾರವು’ ಎಂದು ಮುಖ್ಯಮಂತ್ರಿಗಳು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.