ಡಾ.ರಾಜ್ಕುಮಾರ್ ಪ್ರತಿಷ್ಠಾನದ ಸ್ಥಳ ಈಗ ಒಂದು ಪ್ರವಾಸೋದ್ಯಮ ಸ್ಥಳವಾಗಿದೆ. ಈ ಪ್ರತಿಷ್ಠಾನವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕು. ಈ ಹಿಂದೆ ಈ ಯೋಜನೆಗೆ ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 22 ಕೋಟಿ ಕೊಡಲು ಒಪ್ಪಿದ್ದು, ಅಲ್ಲದೆ,10 ಕೋಟಿ ಬಜೆಟ್ ನಲ್ಲಿ ನಿಗದಿ ಮಾಡಿದ್ದರು. ಈ ಅನುದಾನವನ್ನು ಈಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿಯೂ ಕೇಳಿದ್ದೇವೆ. ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದರು.