ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ ಸ್ಥಿತಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

Last Updated 19 ಆಗಸ್ಟ್ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ನೆರೆ, ಮಳೆಯಿಂದ ತತ್ತರಿಸಿರುವ ಜನರಿಗೆ ಸಮರ್ಪಕವಾಗಿ ಸೌಕರ್ಯ ಕಲ್ಪಿಸಬೇಕು, ನೆರೆ ಪರಿಹಾರ ಕೇಂದ್ರಗಳಲ್ಲಿ ಸಮಸ್ಯೆಗಳಾಗದಂತೆ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದರು.‌ ಪ್ರವಾಹ ಪೀಡಿತ ಪ್ರದೇಶಗಳ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ವಿವರ ಪಡೆದುಕೊಂಡರು.

ಯಾವ ಭಾಗದಲ್ಲಿ ಪ್ರವಾಹ ಪೂರ್ಣ ಪ್ರಮಾಣದಲ್ಲಿ ಕಡಿಮೆಯಾಗಿದೆ, ಪರಿಹಾರ ಕೇಂದ್ರಗಳಲ್ಲಿ ಎಷ್ಟು ಜನರು ಇನ್ನೂ ಇದ್ದಾರೆ, ಎಷ್ಟು ಮಂದಿ ಗ್ರಾಮಗಳಿಗೆ ತೆರಳಿದ್ದಾರೆ, ಈಗ ಯಾವ ಕೆಲಸಗಳು ಆಗಿವೆ, ಮುಂದೆ ಏನೆಲ್ಲ ಆಗಬೇಕು, ಪರಿಹಾರ ವಿತರಣೆಗೆ ತೆಗೆದುಕೊಂಡಿರುವ ಕ್ರಮಗಳು, ನಷ್ಟದ ಅಂದಾಜು ಮೊದಲಾದ ಮಾಹಿತಿಯನ್ನು ಮುಖ್ಯಮಂತ್ರಿಗೆ ಅಧಿಕಾರಿಗಳು ನೀಡಿದರು ಎನ್ನಲಾಗಿದೆ.

ಜನರು ಹಾಗೂ ಜಾನುವಾರುಗಳಿಗೆ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT