<p><strong>ಬೆಂಗಳೂರು</strong>: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಭಾನುವಾರ ಕೋವಿಡ್ 19ಗೆ ಸಂಬಂಧಿಸಿದಂತೆ ಲಂಡನ್ನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ಲಾರ್ಡ್ ಚಾನ್ಸಲರ್ಮತ್ತು ಸೆಕ್ರೆಟರಿ ಆಫ್ಫಾರ್ ಜಸ್ಟೀಸ್, ಮೆಂಬರ್ ಆಫ್ಪಾರ್ಲಿಮೆಂಟ್ ರಾಬರ್ಟ್ ಬಕ್ಲಂಡ್. ಹಾಗು ಸುರೇಶ್ ಗತ್ತಾಪುರ, ಕೌನ್ಸಿಲರ್ ವೆಸ್ಟ್ ಸ್ವಿಂಡನ್ ಟ್ರಸ್ಟಿ ಆಫ್ಹಿಂದೂಟೆಂಪಲ್ ಹಾಗೂಶರವಣ ಗುರುಮೂರ್ತಿ ಸೇರಿದಂತೆ ಹಲವು ಯುಕೆ ಕನ್ನಡ ಬಳಗದ ಸದಸ್ಯರು ಭಾಗವಹಿಸಿದ್ದರು.</p>.<p>ಕನ್ನಡ ಬಳಗದ ಸದಸ್ಯರ ಜೊತೆಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಲಂಡನ್ ಕಾನೂನು ಮಂತ್ರಿರಾಬರ್ಟ್ ಬಕ್ಲಂಡ್,ಕೊರೊನ ಹರಡುತ್ತಿರುವ ಬಗ್ಗೆ ಹಾಗೂಯಾವ ರೀತಿ ಅದನ್ನು ನಿಭಾಯಿಸುತ್ತಿದ್ದೇವೆ ಎನ್ನುವುದನ್ನುವಿವರಿಸಿದರು. ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ಕೊರೊನ ನಿಗ್ರಹ ಮಾಡುವಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿಮಾತನಾಡಿದ ಶರವಣ ಗುರುಮೂರ್ತಿ, ಲಂಡನ್ನಲ್ಲಿಓದುತ್ತಿರುವ ಹಲವು ಕನ್ನಡಿಗ ವಿದ್ಯಾರ್ಥಿಗಳು ಸಾಲ ತೆಗೆದುಕೊಂಡು ಇಲ್ಲಿಗೆ ಬಂದಿದ್ದು ಇದೀಗ ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದುಹೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದಮುಖ್ಯಮಂತ್ರಿ ಯಡಿಯೂರಪ್ಪ ಅವರುಬ್ಯಾಂಕ್ ಅಧಿಕಾರಿಗಳಜೊತೆ ಮಾತನಾಡಿ ಇಎಂಐ ಕಟ್ಟಲು ಸಮಯಾವಕಾಶ ಕೊಡಿಸುವುದಾಗಿಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಭಾನುವಾರ ಕೋವಿಡ್ 19ಗೆ ಸಂಬಂಧಿಸಿದಂತೆ ಲಂಡನ್ನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ಲಾರ್ಡ್ ಚಾನ್ಸಲರ್ಮತ್ತು ಸೆಕ್ರೆಟರಿ ಆಫ್ಫಾರ್ ಜಸ್ಟೀಸ್, ಮೆಂಬರ್ ಆಫ್ಪಾರ್ಲಿಮೆಂಟ್ ರಾಬರ್ಟ್ ಬಕ್ಲಂಡ್. ಹಾಗು ಸುರೇಶ್ ಗತ್ತಾಪುರ, ಕೌನ್ಸಿಲರ್ ವೆಸ್ಟ್ ಸ್ವಿಂಡನ್ ಟ್ರಸ್ಟಿ ಆಫ್ಹಿಂದೂಟೆಂಪಲ್ ಹಾಗೂಶರವಣ ಗುರುಮೂರ್ತಿ ಸೇರಿದಂತೆ ಹಲವು ಯುಕೆ ಕನ್ನಡ ಬಳಗದ ಸದಸ್ಯರು ಭಾಗವಹಿಸಿದ್ದರು.</p>.<p>ಕನ್ನಡ ಬಳಗದ ಸದಸ್ಯರ ಜೊತೆಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಲಂಡನ್ ಕಾನೂನು ಮಂತ್ರಿರಾಬರ್ಟ್ ಬಕ್ಲಂಡ್,ಕೊರೊನ ಹರಡುತ್ತಿರುವ ಬಗ್ಗೆ ಹಾಗೂಯಾವ ರೀತಿ ಅದನ್ನು ನಿಭಾಯಿಸುತ್ತಿದ್ದೇವೆ ಎನ್ನುವುದನ್ನುವಿವರಿಸಿದರು. ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ಕೊರೊನ ನಿಗ್ರಹ ಮಾಡುವಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿಮಾತನಾಡಿದ ಶರವಣ ಗುರುಮೂರ್ತಿ, ಲಂಡನ್ನಲ್ಲಿಓದುತ್ತಿರುವ ಹಲವು ಕನ್ನಡಿಗ ವಿದ್ಯಾರ್ಥಿಗಳು ಸಾಲ ತೆಗೆದುಕೊಂಡು ಇಲ್ಲಿಗೆ ಬಂದಿದ್ದು ಇದೀಗ ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದುಹೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದಮುಖ್ಯಮಂತ್ರಿ ಯಡಿಯೂರಪ್ಪ ಅವರುಬ್ಯಾಂಕ್ ಅಧಿಕಾರಿಗಳಜೊತೆ ಮಾತನಾಡಿ ಇಎಂಐ ಕಟ್ಟಲು ಸಮಯಾವಕಾಶ ಕೊಡಿಸುವುದಾಗಿಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>