<p><strong>ಮೈಸೂರು:</strong> ಸಂವಿಧಾನ ರಚನೆ ವಿಚಾರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪಾತ್ರವನ್ನು ಗೌಣ ಮಾಡಿ, ಕೈಪಿಡಿ ಸಿದ್ಧಪಡಿಸಿ ವಿವಾದಕ್ಕೆ ಕಾರಣವಾಗಿದ್ದ ಸ್ವಯಂಸೇವಾ ಸಂಸ್ಥೆ ಸಿಎಂಸಿಎ (ಚಿಲ್ಡ್ರನ್ಸ್ ಮೂವ್ಮೆಂಟ್ ಫಾರ್ ಸಿವಿಕ್ ಅವೇರ್ನೆಸ್) ಕ್ಷಮೆ ಯಾಚಿಸಿದೆ.</p>.<p>‘ಅಂಬೇಡ್ಕರ್ ಹಾಗೂ ಅವರ ವಿಚಾರಧಾರೆಗಳು ನಮ್ಮ ಸಂಸ್ಥೆಯ ಎಲ್ಲ ಕಾರ್ಯಕ್ರಮಗಳಿಗೂ ಪ್ರೇರಣೆಯಾಗಿದೆ. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಪಾತ್ರವನ್ನು ಕಡಿಮೆಯಾಗಿ ತೋರಿಸುವುದು ನಮ್ಮ ಉದ್ದೇಶವಾಗಿರಲಿಲ್ಲ’ ಎಂದು ಶನಿವಾರ ಬಿಡುಗಡೆ ಮಾಡಿದ ಕ್ಷಮಾಪಣಾ ಪತ್ರದಲ್ಲಿ ಸಂಸ್ಥೆ ತಿಳಿಸಿದೆ.</p>.<p>‘ನಮ್ಮ ಉದ್ದೇಶಪೂರ್ವಕವಲ್ಲದ ಈ ತಪ್ಪಿನಿಂದ ಯಾವುದಾದರೂ ವ್ಯಕ್ತಿ, ಸಂಸ್ಥೆ ಅಥವಾ ಸಮುದಾಯದ ಭಾವನೆಗಳಿಗೆ ನೋವು ಉಂಟಾಗಿದ್ದಲ್ಲಿ, ಪ್ರಾಮಾಣಿಕವಾಗಿ ಮತ್ತು ಬೇಷರತ್ ಕ್ಷಮೆ ಯಾಚಿಸುತ್ತೇವೆ’ ಎಂದು ತಿಳಿಸಿದೆ.</p>.<p>ಕೈಪಿಡಿಯನ್ನು ಸಿಎಂಸಿಎ ಸಂಸ್ಥೆ ಸಿದ್ಧಪಡಿಸಿ ಇಲಾಖೆಗೆ ಕೊಟ್ಟಿತ್ತು. ಅದರಲ್ಲಿ, ‘ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ರಚನೆ ಮಾಡಿಲ್ಲ’ ಎಂದು ಉಲ್ಲೇಖಿಸಲಾಗಿತ್ತು. ಇದಕ್ಕೆ ಆಕ್ರೋಶ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸಂವಿಧಾನ ರಚನೆ ವಿಚಾರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪಾತ್ರವನ್ನು ಗೌಣ ಮಾಡಿ, ಕೈಪಿಡಿ ಸಿದ್ಧಪಡಿಸಿ ವಿವಾದಕ್ಕೆ ಕಾರಣವಾಗಿದ್ದ ಸ್ವಯಂಸೇವಾ ಸಂಸ್ಥೆ ಸಿಎಂಸಿಎ (ಚಿಲ್ಡ್ರನ್ಸ್ ಮೂವ್ಮೆಂಟ್ ಫಾರ್ ಸಿವಿಕ್ ಅವೇರ್ನೆಸ್) ಕ್ಷಮೆ ಯಾಚಿಸಿದೆ.</p>.<p>‘ಅಂಬೇಡ್ಕರ್ ಹಾಗೂ ಅವರ ವಿಚಾರಧಾರೆಗಳು ನಮ್ಮ ಸಂಸ್ಥೆಯ ಎಲ್ಲ ಕಾರ್ಯಕ್ರಮಗಳಿಗೂ ಪ್ರೇರಣೆಯಾಗಿದೆ. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಪಾತ್ರವನ್ನು ಕಡಿಮೆಯಾಗಿ ತೋರಿಸುವುದು ನಮ್ಮ ಉದ್ದೇಶವಾಗಿರಲಿಲ್ಲ’ ಎಂದು ಶನಿವಾರ ಬಿಡುಗಡೆ ಮಾಡಿದ ಕ್ಷಮಾಪಣಾ ಪತ್ರದಲ್ಲಿ ಸಂಸ್ಥೆ ತಿಳಿಸಿದೆ.</p>.<p>‘ನಮ್ಮ ಉದ್ದೇಶಪೂರ್ವಕವಲ್ಲದ ಈ ತಪ್ಪಿನಿಂದ ಯಾವುದಾದರೂ ವ್ಯಕ್ತಿ, ಸಂಸ್ಥೆ ಅಥವಾ ಸಮುದಾಯದ ಭಾವನೆಗಳಿಗೆ ನೋವು ಉಂಟಾಗಿದ್ದಲ್ಲಿ, ಪ್ರಾಮಾಣಿಕವಾಗಿ ಮತ್ತು ಬೇಷರತ್ ಕ್ಷಮೆ ಯಾಚಿಸುತ್ತೇವೆ’ ಎಂದು ತಿಳಿಸಿದೆ.</p>.<p>ಕೈಪಿಡಿಯನ್ನು ಸಿಎಂಸಿಎ ಸಂಸ್ಥೆ ಸಿದ್ಧಪಡಿಸಿ ಇಲಾಖೆಗೆ ಕೊಟ್ಟಿತ್ತು. ಅದರಲ್ಲಿ, ‘ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ರಚನೆ ಮಾಡಿಲ್ಲ’ ಎಂದು ಉಲ್ಲೇಖಿಸಲಾಗಿತ್ತು. ಇದಕ್ಕೆ ಆಕ್ರೋಶ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>