ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಸಮನ್ವಯಕ್ಕೆ ಇಂದು ಕಸರತ್ತು

Last Updated 30 ಆಗಸ್ಟ್ 2018, 19:38 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌–ಕಾಂಗ್ರೆಸ್‌ ಸರ್ಕಾರದ ಸಮನ್ವಯ ಸಮಿತಿಯ ಮೂರನೇ ಸಭೆ ಶುಕ್ರವಾರ ಸಂಜೆ 6ಕ್ಕೆ ನಡೆಯಲಿದೆ.

ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಲವು ಶಾಸಕರು ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತೆ ನೀಡಿರುವ ಹೇಳಿಕೆಗಳು ಹಾಗೂ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು 100 ದಿನಗಳಲ್ಲಿ ತಳೆದ ಪ್ರಮುಖ ನಿರ್ಧಾರಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಗಳಿವೆ.

ಪ್ರಮುಖ ಅಧಿಕಾರಿಗಳ ವರ್ಗಾವಣೆ ಮುನ್ನ ಸಮನ್ವಯ ಸಮಿತಿಯ ಗಮನಕ್ಕೆ ತರಬೇಕು ಎಂದು ಮೊದಲ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿತ್ತು. ಆದರೆ, ಸಮಿತಿಯ ಗಮನಕ್ಕೆ ತಾರದೆ ಕುಮಾರಸ್ವಾಮಿ ಕೆಲವು ಅಧಿಕಾರಿಗಳನ್ನು ವರ್ಗ ಮಾಡಿದ್ದಾರೆ ಎಂದು ಕಾಂಗ್ರೆಸ್‌ ವಲಯದಲ್ಲಿ ಆಕ್ಷೇಪ
ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT