ಪಡುಬಿದ್ರಿಯ ಎರ್ಮಾಳು ಕಲ್ಸಂಕ ಚತುಷ್ಪಥ ಸೇತುವೆ ಕಾಮಗಾರಿ ಮೂರು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ತುಂಬಿಸಿದ ಮಣ್ಣಿನಿಂದ 2018ರ ಮೇ 29ರಂದು ನೆರೆ ಸೃಷ್ಟಿಯಾಗಿತ್ತು. ಪರಿಣಾಮ ಪಾದೆಬೆಟ್ಟು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಾಲುದಾರಿ ಜಲಾವೃತಗೊಂಡು, ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಇಬ್ಬರು ಸಹೋದರಿಯರು ತೋಡಿಗೆ ಬಿದ್ದಿದ್ದರು. 9 ವರ್ಷದ ನಿಧಿ ಆಚಾರ್ಯ ನೀರಿನ ಸೆಳೆತಕ್ಕೆ ಸಿಕ್ಕು ಬಲಿಯಾಗಿದ್ದಳು. ಅಕ್ಕ ನಿಶಾಳನ್ನು ಸ್ಥಳೀಯರು ಕಾಪಾಡಿದ್ದರು. ಈ ಬಾರಿಯೂ ಹೆದ್ದಾರಿಯ ಇಕ್ಕೆಲಗಳಲ್ಲಿ ಮಣ್ಣು ತುಂಬಿಕೊಂಡಿದ್ದು ನೆರೆ ಭೀತಿ ಕಾಡುತ್ತಿದೆ.