ಬೆಂಗಳೂರು, ಬಾಗಲಕೋಟೆ, ಗದಗ, ಬಿಜಾಪುರ ಸೇರಿದಂತೆ ಯಾವುದೇ ಜಿಲ್ಲೆಗಳಲ್ಲಿ ನೇಮಕಾತಿ ನಡೆದರೂ ಸ್ಥಳೀಯರು ನಿರೀಕ್ಷೆಗೂ ಮೀರಿ ಅರ್ಜಿ ಸಲ್ಲಿಸುತ್ತಾರೆ. ಆದರೆ, ಕರಾವಳಿಯಲ್ಲಿ ಮಾತ್ರ ಪರಿಸ್ಥಿತಿ ವ್ಯತಿರಿಕ್ತವಾಗಿದೆ. ಮುಂದೆ ಹೊರ ಜಿಲ್ಲೆಗಳ ಅಭ್ಯರ್ಥಿಗಳು ಅರ್ಜಿ ಹಾಕದಿದ್ದರೆ, ಹೊರ ರಾಜ್ಯದವರು ಕರಾವಳಿಯಲ್ಲಿ ಕೆಲಸಕ್ಕೆ ಸೇರುವ ಸ್ಥಿತಿ ಬರಬಹುದು ಎಂದು ಎಡಿಜಿಪಿ ಆತಂಕ ವ್ಯಕ್ತಪಡಿಸಿದರು.