<p><strong>ಹುಬ್ಬಳ್ಳಿ: </strong>ಆಮದು ಪ್ರಮಾಣ ಕಡಿಮೆ ಮಾಡಿ ದೇಶದಲ್ಲಿಯೇ ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಕಲ್ಲಿದ್ದಲು ಗಣಿಗಾರಿಕೆಯನ್ನು ವಾಣಿಜ್ಯೀಕರಣ ಮಾಡಲಾಗುತ್ತಿದೆ ಎಂದು ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸದ್ಯಕ್ಕೆ 30 ದಿನಗಳಿಗಾಗುವಷ್ಟು ಬೇಕಾಗುವ ಕಲ್ಲಿದ್ದಲು ನಮ್ಮಲ್ಲಿ ಸಂಗ್ರಹವಿದೆ. 2023 ಅಥವಾ 2024ರ ವೇಳೆಗೆ ಭಾರತಕ್ಕೆ ಬೇಕಾಗುವ 1,000ರಿಂದ 1,100 ಮಿಲಿಯನ್ ಟನ್ ಕಲ್ಲಿದ್ದಲನ್ನು ನಮ್ಮಲ್ಲಿಯೇ ಉತ್ಪಾದಿಸುವಂತೆ ಕೋಲ್ ಇಂಡಿಯಾ ಕಂಪನಿಗೆ ಸೂಚಿಸಲಾಗಿದೆ. ಈ ಕಂಪನಿ ವರ್ಷದ ಇಲ್ಲಿಯ ತನಕ 606 ಮಿಲಿಯನ್ ಟನ್ ಉತ್ಪಾದನೆ ಮಾಡಿದೆ. ಹೋದ ವರ್ಷ 251 ಮಿಲಿಯನ್ ಟನ್ ಆಮದು ಮಾಡಿಕೊಳ್ಳಲಾಗಿತ್ತು’ ಎಂದು ತಿಳಿಸಿದರು.</p>.<p>‘ನಮ್ಮಲ್ಲಿ ಸಂಪನ್ಮೂಲವಿದ್ದರೂ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳುತ್ತಿರುವುದು ಮಹಾ ಪಾಪ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಸ್ಪಷ್ಟವಾಗಿ ಹೇಳಿದ್ದಾರೆ. ಆದ್ದರಿಂದ ವಾಣಿಜ್ಯೀಕರಣ ಮಾಡಿ ನಮ್ಮಲ್ಲಿಯೇ ಕಲ್ಲಿದ್ದಲು ಉತ್ಪಾದಿಸಲು ಒತ್ತು ಕೊಡಲಾಗುತ್ತದೆ. ಹಾಗಂದ ಮಾತ್ರಕ್ಕೆ ಕೋಲ್ ಇಂಡಿಯಾವನ್ನು ದುರ್ಬಲಗೊಳಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ವಾಣಿಜ್ಯೀಕರಣ ವಿರೋಧಿಸಿ ಕೋಲ್ ಇಂಡಿಯಾ ಕಂಪನಿ ಉದ್ಯೋಗಿಗಳು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ ‘ಕಂಪನಿಯ ಸಿಬ್ಬಂದಿ ಮನವೊಲಿಸುವ ಪ್ರಯತ್ನವನ್ನು ನಮ್ಮ ಅಧಿಕಾರಿಗಳು ಮಾಡುತ್ತಿದ್ದಾರೆ. ವಾಣಿಜ್ಯೀಕರಣದಿಂದ ಗಣಿಗಾರಿಕೆಗೆ ಧಕ್ಕೆಯಾಗುತ್ತದೆ ಎಂದು ಕೋಲ್ ಇಂಡಿಯಾ ಕಂಪನಿಯವರು ಹೇಳುತ್ತಿದ್ದಾರೆ. ಇದು ಸುಳ್ಳು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಆಮದು ಪ್ರಮಾಣ ಕಡಿಮೆ ಮಾಡಿ ದೇಶದಲ್ಲಿಯೇ ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಕಲ್ಲಿದ್ದಲು ಗಣಿಗಾರಿಕೆಯನ್ನು ವಾಣಿಜ್ಯೀಕರಣ ಮಾಡಲಾಗುತ್ತಿದೆ ಎಂದು ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸದ್ಯಕ್ಕೆ 30 ದಿನಗಳಿಗಾಗುವಷ್ಟು ಬೇಕಾಗುವ ಕಲ್ಲಿದ್ದಲು ನಮ್ಮಲ್ಲಿ ಸಂಗ್ರಹವಿದೆ. 2023 ಅಥವಾ 2024ರ ವೇಳೆಗೆ ಭಾರತಕ್ಕೆ ಬೇಕಾಗುವ 1,000ರಿಂದ 1,100 ಮಿಲಿಯನ್ ಟನ್ ಕಲ್ಲಿದ್ದಲನ್ನು ನಮ್ಮಲ್ಲಿಯೇ ಉತ್ಪಾದಿಸುವಂತೆ ಕೋಲ್ ಇಂಡಿಯಾ ಕಂಪನಿಗೆ ಸೂಚಿಸಲಾಗಿದೆ. ಈ ಕಂಪನಿ ವರ್ಷದ ಇಲ್ಲಿಯ ತನಕ 606 ಮಿಲಿಯನ್ ಟನ್ ಉತ್ಪಾದನೆ ಮಾಡಿದೆ. ಹೋದ ವರ್ಷ 251 ಮಿಲಿಯನ್ ಟನ್ ಆಮದು ಮಾಡಿಕೊಳ್ಳಲಾಗಿತ್ತು’ ಎಂದು ತಿಳಿಸಿದರು.</p>.<p>‘ನಮ್ಮಲ್ಲಿ ಸಂಪನ್ಮೂಲವಿದ್ದರೂ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳುತ್ತಿರುವುದು ಮಹಾ ಪಾಪ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಸ್ಪಷ್ಟವಾಗಿ ಹೇಳಿದ್ದಾರೆ. ಆದ್ದರಿಂದ ವಾಣಿಜ್ಯೀಕರಣ ಮಾಡಿ ನಮ್ಮಲ್ಲಿಯೇ ಕಲ್ಲಿದ್ದಲು ಉತ್ಪಾದಿಸಲು ಒತ್ತು ಕೊಡಲಾಗುತ್ತದೆ. ಹಾಗಂದ ಮಾತ್ರಕ್ಕೆ ಕೋಲ್ ಇಂಡಿಯಾವನ್ನು ದುರ್ಬಲಗೊಳಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ವಾಣಿಜ್ಯೀಕರಣ ವಿರೋಧಿಸಿ ಕೋಲ್ ಇಂಡಿಯಾ ಕಂಪನಿ ಉದ್ಯೋಗಿಗಳು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ ‘ಕಂಪನಿಯ ಸಿಬ್ಬಂದಿ ಮನವೊಲಿಸುವ ಪ್ರಯತ್ನವನ್ನು ನಮ್ಮ ಅಧಿಕಾರಿಗಳು ಮಾಡುತ್ತಿದ್ದಾರೆ. ವಾಣಿಜ್ಯೀಕರಣದಿಂದ ಗಣಿಗಾರಿಕೆಗೆ ಧಕ್ಕೆಯಾಗುತ್ತದೆ ಎಂದು ಕೋಲ್ ಇಂಡಿಯಾ ಕಂಪನಿಯವರು ಹೇಳುತ್ತಿದ್ದಾರೆ. ಇದು ಸುಳ್ಳು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>