ಮುಕ್ಕದಲ್ಲಿರುವ ಶ್ರೀನಿವಾಸ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯಾಗಿರುವ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ನಿವಾಸಿ ಅಬ್ದುಲ್ ರಹಿಮಾನ್ ಬಸಿರತ್ ಹಲ್ಲೆಗೊಳಗಾದವರು. ಹಲ್ಲೆ ನಡೆಸಿದ ಆರೋಪದ ಮೇಲೆ ಸುನೀಲ್ (40), ವಸಂತ್ (42) ಮತ್ತು ಸುಕೀತ್ (23) ಎಂಬುವವರನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವರು ಕೃತ್ಯದಲ್ಲಿ ಭಾಗಿಯಾಗಿದ್ದು, ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.