ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಕೆ.ಆರ್.ರಮೇಶ್ ಕುಮಾರ್ ಸಭಾಧ್ಯಕ್ಷರಾಗಿ ಹಾಗೂ ಕೃಷ್ಣಾ ರೆಡ್ಡಿ ಉಪ ಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಮೈತ್ರಿ ಸರ್ಕಾರ ಪತನದ ಬಳಿಕ ರಮೇಶ್ ಕುಮಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಕೃಷ್ಣಾ ರೆಡ್ಡಿ ಹುದ್ದೆಯಲ್ಲಿ ಮುಂದುವರಿದಿದ್ದರು. ಕೃಷ್ಣಾ ರೆಡ್ಡಿ ವಿರುದ್ಧ ಬಿಜೆಪಿಯ ಮಹಾಂತೇಶ ದೊಡ್ಡಗೌಡರ ಹಾಗೂ ಇತರ ಸದಸ್ಯರು ಮಂಗಳವಾರ ಅವಿಶ್ವಾಸ ನಿರ್ಣಯ ಮಂಡಿಸಲು ಸಿದ್ಧತೆ ನಡೆಸಿದ್ದರು. ಈ ವಿಚಾರ ವಿಧಾನಸಭೆಯ ಕಾರ್ಯಕಲಾಪ ಪಟ್ಟಿಯಲ್ಲಿ ಇತ್ತು. ಕೃಷ್ಣಾ ರೆಡ್ಡಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆಂದು ಕಾಗೇರಿ ಸದನದಲ್ಲಿ ಪ್ರಕಟಿಸಿದರು.