‘ಪಾಕಿಸ್ತಾನದ ಮೇಲಿನ ದಾಳಿ ಘಟನೆ ಬಳಿಕದೇವದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಂಸದರು, ಸೇನೆಯ ಕಾರ್ಯಾಚರಣೆಯನ್ನು ಪ್ರಧಾನಮಂತ್ರಿ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಪಾಕಿಸ್ತಾನದ ಮೇಲೆ ದಾಳಿ ನಡೆಸುವುದು ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಎಂದಿದ್ದರು. ಪ್ರಧಾನಿಯನ್ನು ಅವಮಾನಿಸಿದ್ದಲ್ಲದೆ, ದೇಶದ ಸುರಕ್ಷತೆಯನ್ನು ಪ್ರಶ್ನಿಸಿದ್ದಾರೆ. ಹಾಲಿ ಸಂಸದರಾಗಿದ್ದರೂ ಚುನಾವಣೆ ನೀತಿ ಸಂಹಿತೆ ಜಾರಿಯಾದ ಬಳಿಕ ಈ ಹೇಳಿಕೆ ನೀಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.