ತುಮಕೂರು: ‘ಪಾಕಿಸ್ತಾನದಲ್ಲಿನ ಭಯೋತ್ಪಾದಕರ ಅಡಗುತಾಣಗಳನ್ನು ವಾಯು ದಾಳಿ ಮೂಲಕ ಧ್ವಂಸ ಮಾಡಿದ ಕಾರ್ಯಾಚರಣೆಯನ್ನು ಸಂಭ್ರಮಿಸಬಾರದು ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ದೇಶಪ್ರೇಮಕ್ಕೆ ಧಕ್ಕೆ ತರುವಂಥದ್ದಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕು’ ಎಂದು ಅತುಲ್ಕುಮಾರ್ ಸಬರವಾಲ್ (ಮಧುಗಿರಿ ಮೋದಿ) ಮಧುಗಿರಿ ತಾಲ್ಲೂಕು ಬಡವನಹಳ್ಳಿ ಪೊಲೀಸ್ ಠಾಣೆಗೆ ಶನಿವಾರ ದೂರು ಸಲ್ಲಿಸಿದ್ದಾರೆ.