ಬೆಳಗಾವಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಡಾ.ವಿ.ಎಸ್. ಸಾಧುನವರ ಹಾಗೂ ಚಿಕ್ಕೋಡಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಪ್ರಕಾಶ ಹುಕ್ಕೇರಿ ಅವರು ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಅವರ ಅಣ್ಣ ಶಾಸಕ ರಮೇಶ ಜಾರಕಿಹೊಳಿ ಮಾತ್ರ ಕಾಣಿಸಿಕೊಂಡಿಲ್ಲ. ನಾಮಪತ್ರ ಸಲ್ಲಿಸುವ ವೇಳೆಯೂ ಉಪಸ್ಥಿತರಿರಲಿಲ್ಲ.