ಬೆಂಗಳೂರು/ ದೇವನಹಳ್ಳಿ: ತಮ್ಮ ಪುತ್ರ, ಶಾಸಕ ಮನೋಜ್ ಚೌಧರಿ ಅವರನ್ನು ಬಲವಂತವಾಗಿ ಬೆಂಗಳೂರಿಗೆ ಕರೆತಂದು ರೆಸಾರ್ಟ್ನಲ್ಲಿ ಇಡಲಾಗಿದ್ದು, ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಅವರ ತಂದೆ ನಾರಾಯಣ ಚೌಧರಿ ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ, ಹೊರ ವಲಯದ ರೆಸಾರ್ಟ್ಗಳಲ್ಲಿ ಆಶ್ರಯ ಪಡೆದಿದ್ದ ಬಂಡಾಯ ಶಾಸಕರು ತಮ್ಮ ರಾಜ್ಯಕ್ಕೆ ಪ್ರಯಾಣಿಸಲು ವಿಮಾನ ನಿಲ್ದಾಣಕ್ಕೆ ಹೋಗಿ ವಾಪಸ್ ಬಂದಿದ್ದಾರೆ.