<p><strong>ನವದೆಹಲಿ: </strong>ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿರುವ ನವ ಭಾರತದ ಇಂದಿನ ದಿನಗಳು ದೇಶದ ಬಡವರು ಮತ್ತು ಹಿಂದುಳಿದವರಿಗೆ ಸೇರಿವೆ. ಈ ಸಮುದಾಯಗಳ ಬೆಳವಣಿಗೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ.</p>.<p>ಬಡ ಕುಟುಂಬದಿಂದ ಬಂದ ಬಿ.ಅರ್. ಅಂಬೇಡ್ಕರ್ ಅವರನ್ನು ಅನೇಕರು ಅಪಹಾಸ್ಯ ಮಾಡಿದ್ದರು. ಕಾಲೆಳೆಯಲು ಪ್ರಯತ್ನಿಸಿ ಕೊನೆಗೆ ವಿಫಲರಾದರು. ಬಡವರ ಏಳಿಗೆ ತಡೆಯಲು ಯಾವ ಶಕ್ತಿಗೂ ಸಾಧ್ಯವಿಲ್ಲ ಎಂದರು.</p>.<p>ಭಾನುವಾರ ಪ್ರಸಾರವಾದ 42ನೇ ‘ಮನದ ಮಾತು’ ತಿಂಗಳ ರೇಡಿಯೊ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಭಾರತದ ಚಿತ್ರಣ ಈಗ ಸಂಪೂರ್ಣ ಬದಲಾಗಿದೆ. ಇದು ಡಾ. ಅಂಬೇಡ್ಕರ್ ಭಾರತ. ಅಂದರೆ, ಬಡವರು ಮತ್ತು ಹಿಂದುಳಿದವರಿಗೆ ಸೇರಿದ ಭಾರತ ಎಂದು ಬಣ್ಣಿಸಿದರು.</p>.<p>ಶ್ರೀಮಂತ ಕುಟುಂಬದ ಹಿನ್ನೆಲೆ ಹೊಂದಿದವರು ಮಾತ್ರ ಯಶಸ್ಸು ಕಾಣುತ್ತಾರೆ ಎಂದು ಭಾವಿಸಬೇಕಾಗಿಲ್ಲ. ಬಡತನವನ್ನು ಮೀರಿ ನಿಂತ ಡಾ.ಅಂಬೇಡ್ಕರ್ ಸಾಧನೆ ಎಲ್ಲರಿಗೂ ಮಾದರಿ ಎಂದು ಪ್ರಧಾನಿ ಹೇಳಿದರು. ತಾವೂ ಇದೇ ರೀತಿ ಮೇಲಕ್ಕೆ ಬಂದವರು ಎಂಬುದನ್ನು ಅವರು ನೆನಪಿಸಿಕೊಂಡರು.</p>.<p>‘ಕೈಗಾರಿಕೀಕರಣ ಹೊಸ ಉದ್ಯೋಗಗಳ ಸೃಷ್ಟಿಯ ಮಾರ್ಗ ಎಂದು ಅಂಬೇಡ್ಕರ್ ಹಲವು ವರ್ಷಗಳ ಹಿಂದೆಯೇ ಭವಿಷ್ಯ ನುಡಿದಿದ್ದರು. ಭಾರತ ಔದ್ಯೋಗಿಕ ಶಕ್ತಿಯಾಗಿ ಬೆಳೆಯಬೇಕು ಎಂದು ಅವರು ಕಂಡಿದ್ದ ಕನಸನ್ನು ಇಂದು ನಾವು ಸಾಕಾರಗೊಳಿಸುತ್ತಿದ್ದೇವೆ. ಅವರ ದೂರದೃಷ್ಟಿ ನಮಗೆ ಪ್ರೇರಣೆ’ ಎಂದರು.</p>.<p>ಡಾ. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಏಪ್ರಿಲ್ 14ರಿಂದ ಮೇ 5ರವರೆಗೆ ದೇಶದಾದ್ಯಂತ ‘ಗ್ರಾಮ ಸ್ವರಾಜ್ಯ ಅಭಿಯಾನ’ ಹಮ್ಮಿಕೊಳ್ಳಲಾಗುವುದು. ಗ್ರಾಮಗಳ ಅಭಿವೃದ್ಧಿ, ಬಡತನ ನಿರ್ಮೂಲನೆ, ಸಾಮಾಜಿಕ ನ್ಯಾಯ ಕುರಿತಾಗಿ ವೈವಿಧ್ಯಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.</p>.<p>ಮಹಾತ್ಮ ಗಾಂಧಿ, ರಾಮ್ ಮನೋಹರ ಲೋಹಿಯಾ, ಚೌಧರಿ ಚರಣ್ ಸಿಂಗ್, ದೇವಿಲಾಲ್ ಅವರಂತಹ ನಾಯಕರು ರೈತರು ಮತ್ತು ಕೃಷಿ ಈ ದೇಶದ ಆರ್ಥಿಕ ಬೆನ್ನೆಲುಬು ಎಂದು ಭಾವಿಸಿದ್ದರು ಎಂದು ಮೋದಿ ಸ್ಮರಿಸಿದರು. ಸಧೃಡ ಭಾರತ ಕಟ್ಟಲು ಯುವ ಜನಾಂಗ ಸಧೃಡ ಮನಸ್ಸು ಮತ್ತು ಆರೋಗ್ಯ ಹೊಂದಬೇಕು ಎಂದರು.</p>.<p>*<br /> ಜಾಗತಿಕಮಟ್ಟದಲ್ಲಿ ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಭಾರತ ಹೊಸತನ ಮತ್ತು ಹೂಡಿಕೆಗೆ ಆಕರ್ಷಕ ತಾಣವಾಗಿ ಹೊರಹೊಮ್ಮಿದೆ. ಭಾರತದಲ್ಲಿ ಬಂಡವಾಳ ಹೂಡಲು ಎಲ್ಲ ರಾಷ್ಟ್ರಗಳು ತುದಿಗಾಲ ಮೇಲೆ ನಿಂತಿವೆ.<br /> <em><strong>-ನರೇಂದ್ರ ಮೋದಿ, ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿರುವ ನವ ಭಾರತದ ಇಂದಿನ ದಿನಗಳು ದೇಶದ ಬಡವರು ಮತ್ತು ಹಿಂದುಳಿದವರಿಗೆ ಸೇರಿವೆ. ಈ ಸಮುದಾಯಗಳ ಬೆಳವಣಿಗೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ.</p>.<p>ಬಡ ಕುಟುಂಬದಿಂದ ಬಂದ ಬಿ.ಅರ್. ಅಂಬೇಡ್ಕರ್ ಅವರನ್ನು ಅನೇಕರು ಅಪಹಾಸ್ಯ ಮಾಡಿದ್ದರು. ಕಾಲೆಳೆಯಲು ಪ್ರಯತ್ನಿಸಿ ಕೊನೆಗೆ ವಿಫಲರಾದರು. ಬಡವರ ಏಳಿಗೆ ತಡೆಯಲು ಯಾವ ಶಕ್ತಿಗೂ ಸಾಧ್ಯವಿಲ್ಲ ಎಂದರು.</p>.<p>ಭಾನುವಾರ ಪ್ರಸಾರವಾದ 42ನೇ ‘ಮನದ ಮಾತು’ ತಿಂಗಳ ರೇಡಿಯೊ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಭಾರತದ ಚಿತ್ರಣ ಈಗ ಸಂಪೂರ್ಣ ಬದಲಾಗಿದೆ. ಇದು ಡಾ. ಅಂಬೇಡ್ಕರ್ ಭಾರತ. ಅಂದರೆ, ಬಡವರು ಮತ್ತು ಹಿಂದುಳಿದವರಿಗೆ ಸೇರಿದ ಭಾರತ ಎಂದು ಬಣ್ಣಿಸಿದರು.</p>.<p>ಶ್ರೀಮಂತ ಕುಟುಂಬದ ಹಿನ್ನೆಲೆ ಹೊಂದಿದವರು ಮಾತ್ರ ಯಶಸ್ಸು ಕಾಣುತ್ತಾರೆ ಎಂದು ಭಾವಿಸಬೇಕಾಗಿಲ್ಲ. ಬಡತನವನ್ನು ಮೀರಿ ನಿಂತ ಡಾ.ಅಂಬೇಡ್ಕರ್ ಸಾಧನೆ ಎಲ್ಲರಿಗೂ ಮಾದರಿ ಎಂದು ಪ್ರಧಾನಿ ಹೇಳಿದರು. ತಾವೂ ಇದೇ ರೀತಿ ಮೇಲಕ್ಕೆ ಬಂದವರು ಎಂಬುದನ್ನು ಅವರು ನೆನಪಿಸಿಕೊಂಡರು.</p>.<p>‘ಕೈಗಾರಿಕೀಕರಣ ಹೊಸ ಉದ್ಯೋಗಗಳ ಸೃಷ್ಟಿಯ ಮಾರ್ಗ ಎಂದು ಅಂಬೇಡ್ಕರ್ ಹಲವು ವರ್ಷಗಳ ಹಿಂದೆಯೇ ಭವಿಷ್ಯ ನುಡಿದಿದ್ದರು. ಭಾರತ ಔದ್ಯೋಗಿಕ ಶಕ್ತಿಯಾಗಿ ಬೆಳೆಯಬೇಕು ಎಂದು ಅವರು ಕಂಡಿದ್ದ ಕನಸನ್ನು ಇಂದು ನಾವು ಸಾಕಾರಗೊಳಿಸುತ್ತಿದ್ದೇವೆ. ಅವರ ದೂರದೃಷ್ಟಿ ನಮಗೆ ಪ್ರೇರಣೆ’ ಎಂದರು.</p>.<p>ಡಾ. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಏಪ್ರಿಲ್ 14ರಿಂದ ಮೇ 5ರವರೆಗೆ ದೇಶದಾದ್ಯಂತ ‘ಗ್ರಾಮ ಸ್ವರಾಜ್ಯ ಅಭಿಯಾನ’ ಹಮ್ಮಿಕೊಳ್ಳಲಾಗುವುದು. ಗ್ರಾಮಗಳ ಅಭಿವೃದ್ಧಿ, ಬಡತನ ನಿರ್ಮೂಲನೆ, ಸಾಮಾಜಿಕ ನ್ಯಾಯ ಕುರಿತಾಗಿ ವೈವಿಧ್ಯಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.</p>.<p>ಮಹಾತ್ಮ ಗಾಂಧಿ, ರಾಮ್ ಮನೋಹರ ಲೋಹಿಯಾ, ಚೌಧರಿ ಚರಣ್ ಸಿಂಗ್, ದೇವಿಲಾಲ್ ಅವರಂತಹ ನಾಯಕರು ರೈತರು ಮತ್ತು ಕೃಷಿ ಈ ದೇಶದ ಆರ್ಥಿಕ ಬೆನ್ನೆಲುಬು ಎಂದು ಭಾವಿಸಿದ್ದರು ಎಂದು ಮೋದಿ ಸ್ಮರಿಸಿದರು. ಸಧೃಡ ಭಾರತ ಕಟ್ಟಲು ಯುವ ಜನಾಂಗ ಸಧೃಡ ಮನಸ್ಸು ಮತ್ತು ಆರೋಗ್ಯ ಹೊಂದಬೇಕು ಎಂದರು.</p>.<p>*<br /> ಜಾಗತಿಕಮಟ್ಟದಲ್ಲಿ ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಭಾರತ ಹೊಸತನ ಮತ್ತು ಹೂಡಿಕೆಗೆ ಆಕರ್ಷಕ ತಾಣವಾಗಿ ಹೊರಹೊಮ್ಮಿದೆ. ಭಾರತದಲ್ಲಿ ಬಂಡವಾಳ ಹೂಡಲು ಎಲ್ಲ ರಾಷ್ಟ್ರಗಳು ತುದಿಗಾಲ ಮೇಲೆ ನಿಂತಿವೆ.<br /> <em><strong>-ನರೇಂದ್ರ ಮೋದಿ, ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>