ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಮೇಶ್ ಕುಮಾರ್ ಅವರು ನಮ್ಮನ್ನು ಅನರ್ಹಗೊಳಿಸಿ ನೀಡಿರುವ ಆದೇಶ ಕಾನೂನು ಮತ್ತು ಸಂವಿಧಾನ ಬಾಹಿರವಾಗಿದೆ. ಆದ್ದರಿಂದ ಸುಪ್ರೀಂ ಕೋರ್ಟ್ನಲ್ಲಿ ಉಪ ಚುನಾವಣೆ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ಸಿಗುತ್ತದೆ ಎಂಬ ನಂಬಿಕೆ ಇದೆ. ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ನಮ್ಮ ಅರ್ಜಿಯ ವಿಚಾರಣೆ ನಡೆಯಲಿದೆ. ನಮ್ಮ ವಕೀಲರು ತಡೆಯಾಜ್ಞೆಗೆ ಮನವಿ ಸಲ್ಲಿಸಲಿದ್ದಾರೆ’ ಎಂದು ತಿಳಿಸಿದರು.