ಮುಂಬೈನ ಖಾಸಗಿ ಹೊಟೇಲ್ನಲ್ಲಿ ಬೀಡು ಬಿಟ್ಟಿರುವ ಅತೃಪ್ತ ಶಾಸಕರಕರೆತರುವ ಹೊಣೆಯನ್ನು ಗೃಹ ಸಚಿವ ಎಂ.ಬಿ.ಪಾಟೀಲ್ ಹಾಗೂ ಸಚಿವ ಜಮೀರ್ ಅಹಮದ್ ಅವರಿಗೆ ವಹಿಸಲಾಗಿದೆ ಎಂದು ಕಾಂಗ್ರೆಸ್ನ ಉನ್ನತ ಮೂಲಗಳು ತಿಳಿಸಿವೆ. ಇಂದು ರಾತ್ರಿ 8 ಗಂಟೆಗೆ ಎಂ.ಬಿ. ಪಾಟೀಲ್ ಮತ್ತು ಜಮೀರ್ ಅಹಮದ್ ಮುಂಬೈಗೆ ತೆರಳಿದ್ದಾರೆ ಎನ್ನಲಾಗಿದೆ.