ಹೆಲಿಕಾಪ್ಟರ್ನಿಂದ ಕೆಳಗೆ ಇಳಿಸಿದ ಸೂಟ್ಕೇಸಿನಲ್ಲಿ ಏನಿತ್ತು ಎಂಬ ಪ್ರಶ್ನೆ ಉದ್ಭವಿಸಿದೆ. ಅದನ್ನು ತರಾತುರಿಯಲ್ಲಿ ಕಾರಿಗೆ ಹಾಕುವ ಉದ್ದೇಶ ಏನಿತ್ತು ಎಂಬುದು ಬಹಿರಂಗವಾಗಬೇಕಿದೆ. ಕಾರು ಯಾರಿಗೆ ಸೇರಿದ್ದು, ಪೆಟ್ಟಿಗೆಯನ್ನು ಎಲ್ಲಿಗೆ ಕೊಂಡೊಯ್ಯಲಾಯಿತು ಎಂಬುದರ ಬಗ್ಗೆ ಕೂಲಂಕಶ ತನಿಖೆ ನಡೆಯಬೇಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರರಾದ ಸಿ.ಶಿವುಯಾದವ್ ಒತ್ತಾಯಿಸಿದರು.