ಪಕ್ಷದಲ್ಲಿ ಯಾವದೇ ಗೊಂದಲಗಳಿಲ್ಲ. ನಾಮ ಪತ್ರ ಸಲ್ಲಿಸುವ ದಿನ ಸೇರಿದ್ದ ಜನಸಾಗರವೇ ಕಾಂಗ್ರೆಸ್ ಗೆಲುವಿಗೆ ದಿಕ್ಕಸೂಚಿ. ಮೇ 3ರಂದು ಸಂಜೆ 4 ಕ್ಕೆ ತಾಲ್ಲೂಕಿನ ಸಂಶಿ ಗ್ರಾಮದ ಎಸ್.ಜೆ.ಎಫ್.ಎಸ್. ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಿ.ಕೆ. ಶಿವಕುಮಾರ, ಆರ್.ವಿ. ದೇಶಪಾಂಡೆ, ಎಚ್.ಕೆ. ಪಾಟೀಲ, ಸತೀಶ ಜಾರಕಿಹೊಳಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ದಿನೇಶ ಗುಂಡೂರಾವ್, ಜೆಡಿಎಸ್ ಮುಖಂಡರಾದ ಬಸವರಾಜ ಹೊರಟ್ಟಿ, ಎನ್.ಎಚ್. ಕೋನರಡ್ಡಿ, ಎಂ.ಎಸ್. ಅಕ್ಕಿ ಬಾಗವಹಿಸಲಿದ್ದಾರೆ ಎಂದರು.