ಬೆಂಗಳೂರು: ವಿಶ್ವಾಸ ಮತಯಾಚನೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲೇ ಕಾಂಗ್ರೆಸ್ ಶಾಸಕರು ತಂಗಿರುವ ಪ್ರಕೃತಿ ರೆಸಾರ್ಟ್ನಿಂದ ಶಾಸಕರೊಬ್ಬರು ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳು ಹರಡಿವೆ.
ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಬುಧವಾರ ರಾತ್ರಿ ಹೊರ ಹೊಗಿದ್ದು ಅವರು ಮತ್ತೆ ರೆಸಾರ್ಟ್ಗೆ ವಾಪಾಸು ಆಗಿಲ್ಲ ಎನ್ನಲಾಗಿದೆ. ಶ್ರೀಮಂತ ಪಾಟೀಲ್ ಯಾರ ಸಂಪರ್ಕಕ್ಕೆ ಸಿಕ್ಕಿಲ್ಲ ಎನ್ನಲಾಗಿದೆ.
ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಅವರು ಕೂಡ ಸದನಕ್ಕೆ ಗೈರಾಗುವ ಸಾಧ್ಯತೆಗಳಿವೆ.
ಇದರಿಂದ ಮೈತ್ರಿ ಸರ್ಕಾರದ ಬಲ ಮತ್ತಷ್ಟು ಕುಸಿಯುವ ಸಾಧ್ಯತೆಗಳಿವೆ.