ಬಜೆಟ್ ಮೇಲಿನ ಚರ್ಚೆ ವೇಳೆ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ, ‘ಈ ಯೋಜನೆಯ ಅನುಷ್ಠಾನಕ್ಕೆ ಪ್ರತಿ ವರ್ಷ ₹10 ಸಾವಿರ ಕೋಟಿ ಮೀಸಲಿಡಲಾಗುತ್ತದೆ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಆದರೆ, ನುಡಿದಂತೆ ನಡೆದಿಲ್ಲ’ ಎಂದು ಟೀಕಿಸಿದರು. ಇದನ್ನು ಕಾಂಗ್ರೆಸ್ ಸದಸ್ಯರು ಅಲ್ಲಗಳೆದರು. ‘ಈ ಬಗ್ಗೆ ಪಕ್ಷದ ಪ್ರಣಾಳಿಕೆಯಲ್ಲೇ ಇದೆ’ ಎಂದು ಬಿಜೆಪಿಯ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಹೇಳಿದರು.