ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಗುರುವಾರ ಸಂಜೆಯೇ ದೆಹಲಿಯಲ್ಲಿ ಭೇಟಿ ಮಾಡಿ ಸಂಪುಟಕ್ಕೆ ಯಾರನ್ನೆಲ್ಲ ಪರಿಗಣಿಸಬೇಕು, ನಿಗಮ ಮಂಡಳಿ ಮತ್ತು ಸಂಸದೀಯ ಕಾರ್ಯದರ್ಶಿ ಸ್ಥಾನ ಯಾರಿಗೆ ನೀಡಬೇಕು ಎಂಬ ಬಗ್ಗೆ ಮೊದಲ ಸುತ್ತಿನ ಚರ್ಚೆ ನಡೆಸಲು ರಾಜ್ಯ ನಾಯಕರು ತೀರ್ಮಾನಿಸಿದ್ದರು. ಆದರೆ, ರಾಜ್ಯ ನಾಯಕರು ಅಲ್ಲಿಗೆ ತಲುಪುವುದು ವಿಳಂಬವಾಗಿದ್ದರಿಂದ ಈ ಸಭೆಯನ್ನು ಶುಕ್ರವಾರ ಬೆಳಿಗ್ಗೆ ನಡೆಸಲು ನಿರ್ಧರಿಸಲಾಗಿದೆ.