ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ‘ಬಿಜೆಪಿಯವರು ಆಪರೇಷನ್ ಮಾಡುತ್ತಲೇ ಇರಲಿ ಅದು ಅವರ ಕರ್ತವ್ಯ. ಅದು ಯಾವುದೂ ಯಶಸ್ವಿ ಆಗುವುದಿಲ್ಲ, ನನ್ನ ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಉಮೇಶ್ ಜಾದವ್ಗೆ ಕಾಂಗ್ರೆಸ್ನಲ್ಲೇ ಇದ್ದರೆ ಉಜ್ವಲ ಭವಿಷ್ಯವಿದೆ. ಒಂದು ವೇಳೆ ಬಿಜೆಪಿಗೆ ಹೋದರೆ ಅವರ ಭವಿಷ್ಯ ಹಾಳಾಗಲಿದೆ. ಜಾಧವ್ ಜೊತೆ ನಾನು ಮಾತನಾಡಿದ್ದೇನೆ. ಪಕ್ಷದಲ್ಲೇ ಉಳಿಯುತ್ತೇನೆ ಎಂದು ಹೇಳಿದ್ದಾರೆ. ಅವರು ಬಿಜೆಪಿಗೆ ಹೋಗುವುದಿಲ್ಲವೆಂಬ ವಿಶ್ವಾಸ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.