ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 29ಕ್ಕೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ

Last Updated 25 ಮೇ 2019, 9:14 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಪರಾಮರ್ಶೆ ನಡೆಸಲುಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆದಿದ್ದಾರೆ

ಮೇ 29ರಂದು ಸಂಜೆ 6 ಗಂಟೆಗೆ ಹೋಟೆಲ್ ಅಶೋಕಾದಲ್ಲಿ ಸಭೆ ನಡೆಯಲಿದೆ. ಈಗಾಗಲೇ ಎಲ್ಲಾ ಶಾಸಕರಿಗೆ ಸಭೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ. ಸೋಲಿನ‌ ಪರಾಮರ್ಶೆ, ಪಕ್ಷ ಸಂಘಟನೆ ಬಗ್ಗೆ ಶಾಸಕರ ಜೊತೆ ಚರ್ಚೆ ನಡೆಸಲಾಗುವುದು ಎಂದು ಕಾಂಗ್ರೆಸ್‌ ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ಯಾವುದೇ ಕ್ಷಣದಲ್ಲಿ ಮತ್ತೆ ಆಪರೇಶನ್ ಕಮಲಕ್ಕೆ ಕೈ ಹಾಕುವ ಸಾಧ್ಯತೆಗಳು ಇರುವುದರಿಂದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಲುವಾಗಿ ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ.

ಗೊಂದಲಕ್ಕೆ ಅವಕಾಶ ಇಲ್ಲದಂತೆ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವ ಕುರಿತು ಶಾಸಕರ ಜೊತೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT