ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತೃಪ್ತ ನಾಲ್ಕು ಶಾಸಕರ ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷರಿಗೆ‌ ಕಾಂಗ್ರೆಸ್ ದೂರು

Last Updated 11 ಫೆಬ್ರುವರಿ 2019, 10:46 IST
ಅಕ್ಷರ ಗಾತ್ರ

ಬೆಂಗಳೂರು:ಅತೃಪ್ತ ನಾಲ್ವರು ಶಾಸಕರನ್ನು ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರಿಗೆ‌ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ‌, ಉಪಮುಖ್ಯಮಂತ್ರಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೂರು ಸಲ್ಲಿಸಿದರು.

ಕಾಂಗ್ರೆಸ್‌ನ ಶಾಸಕರಾದರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ, ಉಮೇಶ ಜಾಧವ, ಬಿ.ನಾಗೇಂದ್ರ ಈ ನಾಲ್ವರ ವಿರುದ್ಧ ದೂರು ನೀಡಲಾಗಿದೆ.

ಸೋಮವಾರ ವಿಧಾನಸಭೆ ಕಲಾಪದ ಮಧ್ಯಾಹ್ನದ ಊಟದ ವಿರಾಮದ ವೇಳೆ ಸಭಾಧ್ಯಕ್ಷರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದರು.

ವಿಪ್‌ ಮತ್ತು ನೋಟಿಸ್‌ ಎಲ್ಲವನ್ನೂ ಸೇರಿಸಿದ ವಿವರವಾದ ಮಾಹಿತಿಯುಳ್ಳ82 ಪುಟಗಳ ವರದಿಯನ್ನ ಸಲ್ಲಿಸಿದ್ದಾರೆ.

ಎಲ್ಲ ಶಾಸಕರಿಗೂ ಸದನದಲ್ಲಿ ಪಾಲ್ಗೊಳ್ಳುವಂತೆ ವ್ಹಿಪ್ ಜಾರಿ ಮಾಡಲಾಗಿತ್ತು. ಅಧಿವೇಶನ ಮುಗಿಯುವರೆಗೂ ಬರುವುದಿಲ್ಲ ಎಂದು ನಾಲ್ವರು ಪತ್ರದಲ್ಲಿ ತಿಳಿಸಿದ್ದಾರೆ. ನಾಲ್ವರು ಅತೃಪ್ತರ ವಿರುದ್ಧಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಕ್ರಮ ಜರುಗಿಸುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇವೆ. ಇದು ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿರೋಧವಾಗಿ ಕೈಗೊಂಡ ನಿರ್ಣಯ. ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಸಭಾಧ್ಯಕ್ಷರಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದುಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಎರಡು ದಿನಗಳ ಹಿಂದೆ ತಿಳಿಸಿದ್ದರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT