ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್, ವಿಧಾನಸಭೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿ ಒಂದು ತಿಂಗಳಾಯಿತು. ಈಗಾಗಲೇ ಕೆಪಿಸಿಸಿ ಪದಾಧಿಕಾರಿಗಳನ್ನು ವಿಸರ್ಜಿಸಿದ್ದು, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಏಕಮಾತ್ರ ಪದಾಧಿಕಾರಿ. ರಾಜೀನಾಮೆ ನಂತರ ಸಿದ್ದರಾಮಯ್ಯ, ದಿನೇಶ್ ಕಚೇರಿಯತ್ತ ಸುಳಿದಿಲ್ಲ.