ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಾದಿತ ಹೇಳಿಕೆ: ಸೋಮಶೇಖರ ರೆಡ್ಡಿ ವಿರುದ್ಧ ಕೇಸ್ ದಾಖಲಿಸಲು ಕಾಂಗ್ರೆಸ್ ಮನವಿ

ಕ್ರಿಮಿನಲ್ ಕೇಸು ದಾಖಲಿಸುವಂತೆ ಮನವಿ
Last Updated 4 ಜನವರಿ 2020, 10:18 IST
ಅಕ್ಷರ ಗಾತ್ರ

ಬೆಂಗಳೂರು:ನಿರ್ದಿಷ್ಟ ಸಮುದಾಯವನ್ನು ಉದ್ದೇಶಿಸಿ ವಿವಾದಾತ್ಮಕ ಹೇಳಿಕೆ ನೀಡಿರುವಶಾಸಕ ಸೋಮಶೇಖರ ರೆಡ್ಡಿಯ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಶನಿವಾರ ಮನವಿ ಸಲ್ಲಿಸಿತು.ಪೊಲೀಸ್ ಮಹಾ ನಿರ್ದೇಶಕರ ಪರವಾಗಿ ಎಡಿಜಿಪಿ ಡಾ.ಎಂ.ಎ.ಸಲೀಂ ಅವರು ಮನವಿ ಸ್ವೀಕರಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಶುಕ್ರವಾರ ಬಳ್ಳಾರಿಯಲ್ಲಿ ನಡೆದಿದ್ದ ರ್‍ಯಾಲಿ ವೇಳೆ ಮಾತನಾಡಿದ್ದ ಸೋಮಶೇಖರ್ ರೆಡ್ಡಿ, ‘ನಮ್ಮ ದೇಶದಲ್ಲಿ ಇರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತೆ. ಹಿಂದೂಗಳನ್ನು ಕೆಣಕಬೇಡಿ’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT