‘ಕೈ’ಯಲ್ಲಿದ್ದ ಎರಡೂ ಕ್ಷೇತ್ರಗಳನ್ನು ಮತ್ತೆ ವಶಪಡಿಸಿಕೊಳ್ಳಲೇಬೇಕೆಂಬ ಪಣ ತೊಟ್ಟು, ಈ ಕ್ಷೇತ್ರಗಳಿಗೆ ಸಚಿವರು, ಶಾಸಕರು ಮತ್ತು ಇತರ ಪ್ರಮುಖರನ್ನು ಒಳಗೊಂಡ ತಂಡವನ್ನು ಪ್ರಚಾರ ಉಸ್ತುವಾರಿಗೆ ವೇಣುಗೋಪಾಲ್ ನೇಮಿಸಿದ್ದರು. ಆದರೆ, ಈ ಪೈಕಿ 30ಕ್ಕೂ ಹೆಚ್ಚು ಮಂದಿ ಪ್ರಚಾರದಲ್ಲಿ ಪಾಲ್ಗೊಳ್ಳದೆ ದೂರ ಉಳಿದಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ದಿನೇಶ್ ಅವರಿಂದ ವಿವರಣೆ ಕೇಳಿದ್ದಾರೆ.