‘ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ ಎನ್ನುವ ಶಾಸಕರೆಲ್ಲಾ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ಮಾತು ಕೇಳುತ್ತಿಲ್ಲ. ಸಿದ್ದರಾಮಯ್ಯನವರೇ ತಮ್ಮ ಬೆಂಬಲಿಗ ಶಾಸಕರಿಗೆ ಕುಮ್ಮಕ್ಕು ಕೊಟ್ಟು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಸುತ್ತಿದ್ದಾರೆ. ಕುಮಾರಸ್ವಾಮಿ ಅವರನ್ನು ಯಾರೂ ಸಹ ಮುಖ್ಯಮಂತ್ರಿ ಎಂದು ಒಪ್ಪಿಕೊಳ್ಳುತ್ತಿಲ್ಲ. ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಸಿದ್ದರಾಮಯ್ಯ ಕನಸು ಕಾಣುತ್ತಾ ಇದ್ದಾರೆ, ಅದು ನನಸಾಗಲ್ಲ’ ಎಂದು ಈಶ್ವರಪ್ಪ ಹೇಳಿದರು.