ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್, ಜೆಡಿಎಸ್ ಪ್ರತಿಭಟನೆ

Last Updated 7 ಜುಲೈ 2019, 19:51 IST
ಅಕ್ಷರ ಗಾತ್ರ

ಬೆಂಗಳೂರು: ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಚೇರಿ ಮುಂದೆ ಸೇರಿದ ಕಾರ್ಯಕರ್ತರು, ‘ಶಾಸಕರು ತಮ್ಮ ಸ್ವಾರ್ಥಕ್ಕಾಗಿ ರಾಜೀನಾಮೆ ನೀಡಿದ್ದಾರೆ. ಯಾವುದೇ ಕಾರಣ ನೀಡದೆ ತಕ್ಷಣ ವಾಪಸ್ಪಡೆಯಬೇಕು’ ಎಂದು ಆಗ್ರಹಿಸಿದರು.

‘ಪಕ್ಷ ನಿಮ್ಮೊಂದಿಗೆ ಇದೆ, ನಿಮ್ಮ ಹಿಂದೆ ನಾವಿದ್ದೇವೆ. ಪಕ್ಷದ ಶಿಸ್ತಿನ ಸಿಪಾಯಿಗಳು, ಪಕ್ಷ ತೊರೆಯಬೇಡಿ’ ಎಂದು ಒತ್ತಾಯಿಸಿದರು.

ಜೆಡಿಎಸ್ ಪ್ರತಿಭಟನೆ:ಭಾನುವಾರ ರಾತ್ರಿ ಜೆಡಿಎಸ್ ಕಚೇರಿ ಜೆ.ಪಿ ಭವನದ ಎದುರು ಪಕ್ಷದ ಕಾರ್ಯಕರ್ತರು ಧರಣಿ ನಡೆಸಿ, ಶಾಸಕರ ರಾಜೀನಾಮೆ ವಾಪಸ್‌ಗೆ ಒತ್ತಾಯಿಸಿದರು.

ರಾಜೀನಾಮೆ ನೀಡಿದ ಶಾಸಕರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು. ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಂತಹವರಿಗೆ ವೋಟು ಹಾಕಬಾರದು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT