‘ಜಾಧವ್ ಆಪರೇಷನ್ ಕಮಲ ಆಸೆ– ಅಮಿಷಗಳಿಗೆ ಬಲಿಯಾಗಿದ್ದಾರೆ. ₹30 ಕೋಟಿ ಕುದುರೆ ವ್ಯಾಪಾರ ನಡೆದಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಅವರು ಗೆದ್ದಿದ್ದರು, ಇನ್ನೂ ಅವಧಿ ಇರುವಂತೆ ರಾಜೀನಾಮೆ ನೀಡಿದ್ದು ಏಕೆ ಎಂಬ ಪ್ರಶ್ನೆ ಸಹಜವಾಗಿಯೇ ಉದ್ಭವಿಸುತ್ತದೆ. ಜೆಡಿಎಸ್ನವರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿದರು. ಆದರೆ ನಾವೇನು ಆಪರೇಷನ್ ಮಾಡಿರಲಿಲ್ಲ, ಹಣ ನೀಡಿರಲಿಲ್ಲ. ಅಷ್ಟಕ್ಕೂ ಅದು ಗೋಪ್ಯ ಮತದಾನವಾಗಿತ್ತು’ ಎಂದರು.