ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಮಂಗಳವಾರ ವಿಧಾನಸೌಧದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಕೆಸಿ ವೇಣುಗೋಪಾಲ್ ಮತ್ತು ಕಾಂಗ್ರೆಸ್ ಅಧ್ಯಕ್ಷದಿನೇಶ್ಗುಂಡೂರಾವ್ ಅವರೂ ಸಭೆಯಲ್ಲಿ ಹಾಜರಿರಲಿದ್ದಾರೆ.ಸಭೆಗೆ ಎಲ್ಲ ಶಾಸಕರೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ಸಭೆಗೆ ಗೈರಾದರೆ, ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಶಾಸಕರಿಗೆ ಸೂಚಿಸಲಾಗಿದೆ.