’ಶಾಸಕರನ್ನು ಹೆದರಿಸಿ, ಬೆದರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಸರ್ಕಾರ ರಚನೆಯಾಗಿ ಆರು ತಿಂಗಳೂ ಆಗಿಲ್ಲ. ಆಗಲೇ ಪ್ರಧಾನಿ ಮೋದಿ, ಅಮಿತ್ ಶಾ ಸರ್ಕಾರ ಬೀಳಿಸಲು ಹೊರಟಿದ್ದಾರೆ. ಅತೃಪ್ತ ಶಾಸಕರುಮುಂಬೈಗೆ ತೆರಳಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಇದನ್ನು ಮಾಡಿರೋದು ಯಾರು? ಏನು ರಾಜೀನಾಮೆ ನೀಡಿರುವ ಶಾಸಕರು ವಿಮಾನ ಮಾಡಿಕೊಂಡು ಹೋಗ್ತಾರಾ’ ಎಂದು ಪ್ರಶ್ನಿಸಿದರು.