ಬಿಜೆಪಿ ಜತೆ ನಿಕಟ ಬಾಂಧವ್ಯ ಹೊಂದಿದ್ದಾರೆ ಎನ್ನಲಾಗಿರುವ ಕಾಂಗ್ರೆಸ್ನ ರಮೇಶ ಜಾರಕಿಹೊಳಿ, ಮಹೇಶ ಕುಮಟಳ್ಳಿ, ಬಿ. ನಾಗೇಂದ್ರ ಹಾಗೂ ಉಮೇಶ ಜಾಧವ ಅವರು 10 ದಿನಗಳಿಂದ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ.ತಮ್ಮ ‘ಒಗ್ಗಟ್ಟು’ ಪ್ರದರ್ಶಿಸಲು ಸಿದ್ದರಾಮಯ್ಯ ಕರೆದಿದ್ದ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದ ಈ ನಾಲ್ವರಿಗೆ ಪಕ್ಷ ನೋಟಿಸ್ ನೀಡಿತ್ತು. ಅದಕ್ಕೆ ಯಾರೊಬ್ಬರೂ ಉತ್ತರ ನೀಡಿಲ್ಲ.