ಸೋಮವಾರ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಚೇರಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, 'ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಎಂ.ಬಿ.ಪಾಟೀಲ್, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಪಟ್ಟಕ್ಕೇರಲು ಸರದಿಯಲ್ಲಿ ನಿಂತಿದ್ದಾರೆ. ಎಲ್ಲರೂ ಸೇರಿ ಮುಖ್ಯಮಂತ್ರಿಯವರ ಕುರ್ಚಿಗೆ ಟೈಮ್ ಬಾಂಬ್ ಇಟ್ಟು ಕಾಯುತ್ತಿದ್ದಾರೆ' ಎಂದು ಆರೋಪಿಸಿದರು.